Asianet Suvarna News Asianet Suvarna News

ಶಿವಮೊಗ್ಗ ಹುಣಸೋಡಿನಲ್ಲಿ ಭೀಕರ ಸ್ಫೋಟ, ಮೋದಿ ಸಂತಾಪ

ಶಿವಮೊಗ್ಗದ ಅಕ್ರಮ ಕಲ್ಲು ಗಣಿಗಾರಿಕೆ ಪ್ರದೇಶದಲ್ಲಿ ಮಹಾದುರಂತವೊಂದು ಸಂಭವಿಸಿದೆ. ಗಣಿ ಪ್ರದೇಶದಲ್ಲಿ ಬಂಡೆಗಳನ್ನು ಸ್ಫೋಟಿಸಲು ಲಾರಿಯಲ್ಲಿ ಸಂಗ್ರಹಿಸಿಟ್ಟಿದ್ದ ಹತ್ತಾರು ಪೆಟ್ಟಿಗೆಯಷ್ಟು ಜಿಲೆಟಿನ್ ಏಕಕಾಲದಲ್ಲಿ ಸ್ಫೋಟಿಸಿ ಕನಿಷ್ಠ 6 ಮಂದಿ ಮೃತಪಟ್ಟಿದ್ದಾರೆ. 

ಬೆಂಗಳೂರು (ಜ. 22): ಶಿವಮೊಗ್ಗದ ಅಕ್ರಮ ಕಲ್ಲು ಗಣಿಗಾರಿಕೆ ಪ್ರದೇಶದಲ್ಲಿ ಮಹಾದುರಂತವೊಂದು ಸಂಭವಿಸಿದೆ. ಗಣಿ ಪ್ರದೇಶದಲ್ಲಿ ಬಂಡೆಗಳನ್ನು ಸ್ಫೋಟಿಸಲು ಲಾರಿಯಲ್ಲಿ ಸಂಗ್ರಹಿಸಿಟ್ಟಿದ್ದ ಹತ್ತಾರು ಪೆಟ್ಟಿಗೆಯಷ್ಟು ಜಿಲೆಟಿನ್ ಏಕಕಾಲದಲ್ಲಿ ಸ್ಫೋಟಿಸಿ ಕನಿಷ್ಠ 6 ಮಂದಿ ಮೃತಪಟ್ಟಿದ್ದಾರೆ.

ಹುಣಸೋಡು ಮಹಾದುರಂತ, ಉನ್ನತ ಮಟ್ಟದ ತನಿಖೆಗೆ ಸಿಎಂ ಆದೇಶ  

ಈ ಮಹಾದುರಂತದ ಬಗ್ಗೆ ಮೋದಿ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. ಶಿವಮೊಗ್ಗದಲ್ಲಿ ನಡೆದ ಮಹಾದುರಂತದಲ್ಲಿ ಕೆಲವರು ಸಾವನ್ನಪ್ಪಿರುವುದು ನೋವನ್ನುಂಟು ಮಾಡಿದೆ. ಗಾಯಾಳುಗಳು ಬೇಗ ಚೇತರಿಸಿಕೊಳ್ಳಲು ಎಂದು ಪ್ರಾರ್ಥಿಸುತ್ತೇನೆ. ರಾಜ್ಯ ಸರ್ಕಾರ ಎಲ್ಲಾ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.