ಕಾಂಗ್ರೆಸ್ ನಾಯಕರ ವಿರುದ್ಧ FIR ದಾಖಲು..!
ರಾಜ್ಯ ಸರ್ಕಾರದ ಅನುಮತಿ ಪಡೆಯದೇ ಪ್ರತಿಭಟನೆ ನಡೆಸಿದ ನಾಯಕರ ವಿರುದ್ಧ ಕೇಸ್ ದಾಖಲಿಸಲಾಗಿದೆ ಎಂದು ಗೃಹಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರು(ಜೂ.29): ನಿರಂತರವಾಗಿ ಪೆಟ್ರೋಲ್ ಬೆಲೆ ಏರಿಕೆಯನ್ನು ಖಂಡಿಸಿ ರಾಜ್ಯ ಕಾಂಗ್ರೆಸ್ ನಾಯಕರು ಇಂದು ಬೀದಿಗಿಳಿದು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿತ್ತು. ಈಗ ಪ್ರತಿಭಟನೆ ನಡೆಸಿದರು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆಯಿದೆ. ರಾಜ್ಯ ಸರ್ಕಾರದ ಅನುಮತಿ ಪಡೆಯದೇ ಪ್ರತಿಭಟನೆ ನಡೆಸಿದ ನಾಯಕರ ವಿರುದ್ಧ ಕೇಸ್ ದಾಖಲಿಸಲಾಗಿದೆ ಎಂದು ಗೃಹಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಕೋವಿಡ್ 19 ಸಂಕಷ್ಟದ ಸಂದರ್ಭದಲ್ಲಿ ಈ ರೀತಿ ಗುಂಪುಗೂಡಿ ಪ್ರತಿಭಟನೆ ಮಾಡಬೇಡಿ ಎಂದು ಸೂಚಿಸಿದ್ದೆವು. ಹೀಗಿದ್ದೂ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಪ್ರತಿಭಟನೆ ಮಾಡಿದ್ದಾರೆ. ಅವರ ವಿರುದ್ಧ ಕೇಸ್ ದಾಖಲಿಸಲಾಗಿದೆ. ಮುಂದಿನ ಕ್ರಮಗಳನ್ನು ಜರುಗಿಸಲಿದ್ದೇವೆ ಎಂದು ಬೊಮ್ಮಾಯಿ ಹೇಳಿದ್ದಾರೆ.
ರಾಜ್ಯದಲ್ಲಿ ಕೊರೋನಾ ಸ್ಫೋಟ ಗ್ಯಾರಂಟಿ..!
ಇನ್ನು ಗೃಹಸಚಿವ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ನಮ್ಮ ಮೇಲೆ ದೂರು ದಾಖಲಾದ್ರೂ ನಮ್ಮ ಹೋರಾಟ ನಿಲ್ಲಲ್ಲ, ಯಾವ ಕಚೇರಿಯಲ್ಲಿ ಏನೇನು ನಡೆಯುತ್ತಿದೆ ಎಂದು ಗೊತ್ತಿದೆ. ಸಮಯ ಬಂದಾಗ ಎಲ್ಲವನ್ನೂ ಹೇಳುತ್ತೇನೆಂದು ಗುಡುಗಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ