Asianet Suvarna News Asianet Suvarna News

ಸಚಿವರ ಮನೆ ಬಾಗಿಲಿಗೆ ವಕ್ಕರಿಸಿದ ಕೊರೋನಾ ಸೋಂಕು..!


ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ವಾಸವಾಗಿದ್ದ ಯುವಕನಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ತೀವ್ರ ಜ್ವರದಿಂದ ಬಳಲುತ್ತಿದ್ದ ಯುವಕನಿಗೆ ಕೊರೋನಾ ಸೋಂಕು ವಕ್ಕರಿಸಿದೆ. ಯುವಕ ವಾಸವಾಗಿದ್ದ ಮನೆಯ ರಸ್ತೆಯನ್ನು ಇದೀಗ ಬಿಬಿಎಂಪಿ ಅಧಿಕಾರಿಗಳು ಸೀಲ್‌ಡೌನ್ ಮಾಡಿದ್ದಾರೆ.

ಬೆಂಗಳೂರು(ಜೂ.30): ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಕೆ. ಗೋಪಾಲಯ್ಯ ಮನೆ ಬಾಗಿಲಿಗೆ ಕೊರೋನಾ ಸೋಂಕು ಬಂದು ನಿಂತಿದೆ. ಸಚಿವರ ಮನೆಯ ಸಮೀಪದಲ್ಲೇ ವಾಸವಿದ್ದ 25 ವರ್ಷದ ಯುವಕನಿಗೆ ಕೊರೋನಾ ಸೋಂಕು ತಗುಲಿರುವುದು ಆತಂಕಕ್ಕೆ ಎಡೆ ಮಾಡಿ ಕೊಟ್ಟಿದೆ.

ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ವಾಸವಾಗಿದ್ದ ಯುವಕನಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ತೀವ್ರ ಜ್ವರದಿಂದ ಬಳಲುತ್ತಿದ್ದ ಯುವಕನಿಗೆ ಕೊರೋನಾ ಸೋಂಕು ವಕ್ಕರಿಸಿದೆ. ಯುವಕ ವಾಸವಾಗಿದ್ದ ಮನೆಯ ರಸ್ತೆಯನ್ನು ಇದೀಗ ಬಿಬಿಎಂಪಿ ಅಧಿಕಾರಿಗಳು ಸೀಲ್‌ಡೌನ್ ಮಾಡಿದ್ದಾರೆ.

ಅಂತರ್ ಜಿಲ್ಲಾ ಸಂಚಾರಕ್ಕೆ ಬ್ರೇಕ್ ಹಾಕಲು ಸರ್ಕಾರ ಚಿಂತನೆ

ಸಚಿವ ಕೆ ಗೋಪಾಲಯ್ಯ ವಾಸವಿದ್ದ ಮನೆ ರಸ್ತೆಯೇ ಸೀಲ್‌ಡೌನ್ ಆಗಿರುವುದು ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಅದೇ ರಸ್ತೆಯಲ್ಲಿ ಓಡಾಡುವ ಸಚಿವ ಗೋಪಾಲಯ್ಯ ಅವರಿಗೆ ಕೊರೋನಾ ಭೀತಿ ಎದುರಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

Video Top Stories