ವಿನಯ್ ಕುಲಕರ್ಣಿ ಬಂಧನ: ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ
ಪ್ರಾಮಾಣಿಕವಾದ ತನಿಖೆ ನಡೆಯಬೇಕು| ಯಾವುದೇ ರಾಜಕೀಯ ಪ್ರಭಾವಕ್ಕೆ ಒಳಗಾಗದೆ ಸಿಬಿಐ ಅಧಿಕಾರಿಗಳು ಕೆಲಸ ಮಾಡಬೇಕು| ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಅನ್ಯಾಯವಾದ ನೊಂದ ಕುಟುಂಬಕ್ಕೆ ನಿಜವಾದ ನ್ಯಾಯ ಸಿಗಬೇಕು: ಹೆಚ್.ಡಿ.ಕುಮಾರಸ್ವಾಮಿ|
ಬೆಂಗಳೂರು(ನ.05): ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಪ್ರಾಮಾಣಿಕವಾದ ತನಿಖೆ ನಡೆಯಬೇಕು, ಯಾವುದೇ ರಾಜಕೀಯ ಪ್ರಭಾವಕ್ಕೆ ಒಳಗಾಗದೆ ಸಿಬಿಐ ಅಧಿಕಾರಿಗಳು ಕೆಲಸ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ವಿನಯ್ ಕುಲಕರ್ಣಿ ಅರೆಸ್ಟ್: ಯೋಗೇಶ್ ಗೌಡ ಸ್ನೇಹಿತ ಬಿಚ್ಚಿಟ್ಟ ಷಡ್ಯಂತ್ರ
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಅನ್ಯಾಯವಾದ ನೊಂದ ಕುಟುಂಬಕ್ಕೆ ನಿಜವಾದ ನ್ಯಾಯ ಸಿಗುವಂತಾಗಬವೇಕು ಎಂದು ಹೇಳಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನ ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.