Asianet Suvarna News Asianet Suvarna News

ರಾಮ ಮಂದಿರ ದೇಣಿಗೆ ವಿವಾದಕ್ಕೆ ಸಮಜಾಯಿಷಿ ಕೊಟ್ಟ ಎಚ್‌ಡಿಕೆ

ಬಿಜೆಪಿ ನಾಯಕರಾದ ಸಿ.ಟಿ.ರವಿ ಹಾಗೂ ಎಂ.ಪಿ.ರೇಣುಕಾಚಾರ್ಯ ಅವರು ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ. ಇನ್ನು ಈ ಬಗ್ಗೆ ಸ್ವತಃ ಕುಮಾರಸ್ವಾಮಿ ಏಷ್ಯಾನೆಟ್ ಸುವರ್ಣನ್ಯೂಸ್‌ ಜೊತೆ ಫೋನ್‌ನಲ್ಲಿ ಸಮಜಾಯಿಷಿ ನೀಡಿದ್ದಾರೆ.

ಬೆಂಗಳೂರು (ಫೆಬ್ರವರಿ 15); ರಾಮ ಮಂದಿರ ನಿರ್ಮಾಣಕ್ಕಾಗಿ ಈಗಾಗಲೇ ದೇಶದಾದ್ಯಂತ ಜನರಿಂದ ದೇಣಿಗೆ ಸ್ವೀಕರಿಸಲಾಗುತ್ತಿದೆ. ಆದರೆ, ರಾಮ ಮಂದಿರದ ನಿರ್ಮಾಣಕ್ಕೆ ದೇಣಿಗೆ ನೀಡದವರ ಮನೆಗೆ ಆರ್​ಎಸ್​ಎಸ್​ ಸಂಘಟನೆ ಗುರುತು ಮಾಡುತ್ತಿದೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.

ರಾಮ ಮಂದಿರ ದೇಣಿಗೆ ದಂಗಲ್: ಕಿಡಿ ಹೊತ್ತಿಸಿದ ಎಚ್‌ಡಿಕೆಗೆ ಕೇಸರಿ ನಾಯಕರ ತಿರುಗೇಟು

ಇದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಬಿಜೆಪಿ ನಾಯಕರಾದ ಸಿ.ಟಿ.ರವಿ ಹಾಗೂ ಎಂ.ಪಿ.ರೇಣುಕಾಚಾರ್ಯ ಅವರು ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ. ಇನ್ನು ಈ ಬಗ್ಗೆ ಸ್ವತಃ ಕುಮಾರಸ್ವಾಮಿ ಏಷ್ಯಾನೆಟ್ ಸುವರ್ಣನ್ಯೂಸ್‌ ಜೊತೆ ಫೋನ್‌ನಲ್ಲಿ ಸಮಜಾಯಿಷಿ ನೀಡಿದ್ದಾರೆ.

Video Top Stories