Asianet Suvarna News Asianet Suvarna News

ವಾಣಿ ವಿಲಾಸ ಆಸ್ಪತ್ರೆ ಸಿಬ್ಬಂದಿಗೆ ಧೈರ್ಯ ತುಂಬಿದ ಸಚಿವ ಶ್ರೀರಾಮುಲು

ಪಾದರಾಯನಪುರ ಮುಂತಾದ ಕಡೆಗಳಿಂದ ಕೆಲ ಗರ್ಭಿಣಿಯರು ಕೊರೋನಾ ಸೋಂಕು ಇರುವುದನ್ನು ಮುಚ್ಚಿಟ್ಟು ಹೆರಿಗೆ ಮಾಡಿಸಿಕೊಳ್ಳಲು ವಾಣಿ ವಿಲಾಸ ಆಸ್ಪತ್ರೆಗೆ ಬರುತ್ತಿದ್ದಾರೆ. ಇಂದು ಅಂತಹದ್ದೇ ಒಂದು ಪ್ರಕರಣ ನಡೆದಿದ್ದು, ಕೊರೋನಾ ಸೋಂಕಿತೆಯೊಬ್ಬರು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು.

ಬೆಂಗಳೂರು(ಮೇ.09): ಕೊರೋನಾ ವಾರಿಯರ್ಸ್‌ಗಳಾದ ಡಾಕ್ಟರ್ಸ್ ಹಾಗೂ ನರ್ಸ್‌ಗಳಿಗೀಗ ಕೊರೋನಾ ಭಯ ಕಾಡಲಾರಂಭಿಸಿದೆ. ಈ ಕುರಿತಂತೆ ಆರೋಗ್ಯ ಸಚಿವ ಶ್ರೀರಾಮುಲು ವೈದ್ಯರು ಹಾಗೂ ಸಿಬ್ಬಂದಿಗಳ ಜತೆ ಮಾತುಕತೆ ನಡೆಸಿ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ.

ಹೌದು, ಪಾದರಾಯನಪುರ ಮುಂತಾದ ಕಡೆಗಳಿಂದ ಕೆಲ ಗರ್ಭಿಣಿಯರು ಕೊರೋನಾ ಸೋಂಕು ಇರುವುದನ್ನು ಮುಚ್ಚಿಟ್ಟು ಹೆರಿಗೆ ಮಾಡಿಸಿಕೊಳ್ಳಲು ವಾಣಿ ವಿಲಾಸ ಆಸ್ಪತ್ರೆಗೆ ಬರುತ್ತಿದ್ದಾರೆ. ಇಂದು ಅಂತಹದ್ದೇ ಒಂದು ಪ್ರಕರಣ ನಡೆದಿದ್ದು, ಕೊರೋನಾ ಸೋಂಕಿತೆಯೊಬ್ಬರು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು.

ಕೊರೊನಾ ಮಹಾಮಾರಿ ತಡೆಗೆ ಸಿಕ್ಕಿದೆ ರಾಮಬಾಣ..!

ಗರ್ಭಿಣಿ ಮಹಿಳೆಗೆ ಕೊರೋನಾ ಸೋಂಕು ಇರುವುದು ಖಚಿತವಾದ ಬೆನ್ನಲ್ಲೇ ವಾಣಿ ವಿಲಾಸ ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಈ ಬಗ್ಗೆ ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದೇನು ಎನ್ನುವುದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ.

Video Top Stories