Asianet Suvarna News Asianet Suvarna News

ಮಳೆಗೆ ನಲುಗಿದ ಬೆಂಗಳೂರು : ಪರಿಸ್ಥಿತಿ ಅವಲೋಕಿಸುವಂತೆ ಬಿಬಿಎಂಪಿಗೆ ಸಿಎಂ ಸೂಚನೆ

ಮಹಾಮಳೆಗೆ ಬೆಂಗಳೂರು ನಲುಗಿ ಹೋಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ 800 ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿದೆ. ಕೆಲವು ಕಡೆ ಗೋಡೆ ಕುಸಿದು ಬಿದ್ದಿದೆ. ಜನ ಜೀವನ ಅಸ್ತವ್ಯಸ್ತಗೊಂಡಿದೆ. 

ಬೆಂಗಳೂರು (ಅ. 24): ಮಹಾಮಳೆಗೆ ಬೆಂಗಳೂರು ನಲುಗಿ ಹೋಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ 800 ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿದೆ. ಕೆಲವು ಕಡೆ ಗೋಡೆ ಕುಸಿದು ಬಿದ್ದಿದೆ. ಜನ ಜೀವನ ಅಸ್ತವ್ಯಸ್ತಗೊಂಡಿದೆ. 

ಮಹಾಮಳೆಗೆ ಮುಳುಗಿದ ಬೆಂಗಳೂರು; ಮುಳುಗಿತು ಮನೆಗಳು, ಕೊಚ್ಚಿ ಹೋಯ್ತು ಕಾರು ಬೈಕುಗಳು

ಸಿಎಂ ಬಿಎಸ್‌ವೈ ಬಿಬಿಎಂಪಿ ಕಮಿಷನರ್‌ಗೆ ಕರೆ ಮಾಡಿ, ನೀರು ನುಗ್ಗಿದ ಪ್ರದೇಶಗಳಿಗೆ ಭೇಟಿ ನೀಡಿ. ಅಲ್ಲಿನ ಪರಿಸ್ಥಿತಿ ಅವಲೋಕಿಸಿ, ಸೂಕ್ತ ಕ್ರಮಗಳನ್ನು ಕೈಗೊಳ್ಳಿ ಎಂದು ಸೂಚಿಸಿದ್ದಾರೆ. ಜೊತೆಗೆ ಇನ್ನೂ 2 ದಿನ ಭಾರೀ ಮಳೆ ಹಿನ್ನಲೆಯಲ್ಲಿ ಎಚ್ಚರ ವಹಿಸಲು ಸೂಚನೆ ನೀಡಿದ್ದಾರೆ.