ಮಳೆ ಅವಾಂತರ: ಮನೆಗೊಳಗೆ ನುಗ್ಗಿದ ನೀರು ಹೊರಹಾಕುವಾಗ ವಿದ್ಯುತ್ ತಗುಲಿ ವ್ಯಕ್ತಿ ಸಾವು
ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆ ಭಾರೀ ಅವಾಂತರಗಳನ್ನು ಸೃಷ್ಟಿಸಿದೆ. ಮನೆಗಳಿಗೆ ನೀರು ನುಗ್ಗಿದೆ, ಕೆಲವೆಡೆ ಗೋಡೆ ಕುಸಿದಿದೆ.
ಬೆಂಗಳೂರು (ಅ. 12): ನಗರದಲ್ಲಿ ಸುರಿದ ಧಾರಾಕಾರ ಮಳೆ ಭಾರೀ ಅವಾಂತರಗಳನ್ನು ಸೃಷ್ಟಿಸಿದೆ. ಮನೆಗಳಿಗೆ ನೀರು ನುಗ್ಗಿದೆ, ಕೆಲವೆಡೆ ಗೋಡೆ ಕುಸಿದಿದೆ. ಮನೆಯಲ್ಲಿದ್ದ ಸ್ವಿಚ್ ಬೋರ್ಡ್ನಿಂದ ವಿದ್ಯುತ್ ತಗುಲಿ ವ್ಯಕ್ತಿ ಸಾವನ್ನಪ್ಪಿದ್ದಾರೆ. ಕೆ ಪಿ ಅಗ್ರಹಾರದ ವೆಂಕಟೇಶ್ ಮೃತಪಟ್ಟ ದುರ್ದೈವಿ. ಮನೆಗೆ ನುಗ್ಗಿದ ನೀರನ್ನು ಹೊರ ಹಾಕುವಾಗ, ವಿದ್ಯುತ್ ತಗುಲಿ ಮೃತಪಟ್ಟಿದ್ಧಾರೆ.
ಏರ್ಪೋರ್ಟ್ ಟರ್ಮಿನಲ್ಗೆ ನುಗ್ಗಿದ ನೀರು, ಟ್ರಾಕ್ಟರ್ ಏರಿದ ನಿಲ್ದಾಣ ತಲುಪಿದ ಪ್ರಯಾಣಿಕರು!