
ಹಿಜಾಬ್ ಬೆಂಬಲಿಸಿ ಬಂದ್ಗೆ ಕರೆ, ಸದನದಲ್ಲಿ ಮಾಜಿ ಸಿಎಂ ಆಕ್ರೋಶ
ಹಿಜಾಬ್ ತೀರ್ಪು ಬಗ್ಗೆ ಪರ-ವಿರೋಧಗಳು ವ್ಯಕ್ತವಾಗುತ್ತಿವೆ. ಅಲ್ಲದೇ ಹಿಜಾಬ್ ಬೆಂಬಲಿಸಿ ಮುಸ್ಲಿಂ ಸಂಘಟನೆಗಳು ಬಂದ್ಗೆ ಕೊಟ್ಟಿವೆ. ಇದರಿಂದ ಆಕ್ರೋಶಗೊಂಡ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸದನದಲ್ಲಿ ಈ ಬಗ್ಗೆ ಪ್ರಸ್ತಾಪಿಸಿ ಆಕ್ರೊಶ ಹೊರಹಾಕಿದರು.
ಬೆಂಗಳೂರು, (ಮಾ.17): ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲಎಂದು ಹೈಕೋರ್ಟ್ ಪೂರ್ಣ ಪೀಠದಿಂದ ಮಹತ್ವದ ತೀರ್ಪು ನೀಡಿದೆ. ಮುಸ್ಲಿಂ ಮಹಿಳೆಯರು ಹಿಜಾಬ್ (Hijab Row) ಧರಿಸುವುದು ಕಡ್ಡಾಯವಲ್ಲ. ಸಿಜೆ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್, ನ್ಯಾ. ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್ರವನ್ನು ಒಳಗೊಂಡ ಪೂರ್ಣ ಪೀಠ. ಸಮವಸ್ತ್ರ ನಿಗದಿಪಡಿಸುವ ಅಧಿಕಾರ ಶಾಲೆಗಳಿಗಿದೆ. ರಾಜ್ಯ ಸರ್ಕಾರದ ಆದೇಶ ಕಾನೂನುಬದ್ಧವಾಗಿದೆ. ಸಮವಸ್ತ್ರದ ಜತೆ ಹಿಜಾಬ್ಗೆ ಅನುಮತಿ ಕೋರಿ ಸಲ್ಲಿಸಿದ್ದ, ರಿಟ್ ಅರ್ಜಿಗಳನ್ನು ಹೈಕೋರ್ಟ್ ಪೂರ್ಣ ಪೀಠ ವಜಾಗೊಳಿಸಿದೆ.
ಉಡುಪಿಯಲ್ಲಿ ಮತ್ತೆ ಹಿಜಾಬ್ ಕಿರಿಕ್, ಪ್ರಚೋದನಕಾರಿ ಗೋಡೆ ಬರಹ ಪತ್ತೆ
ಇದೀಗ ಹಿಜಾಬ್ ತೀರ್ಪು ಬಗ್ಗೆ ಪರ-ವಿರೋಧಗಳು ವ್ಯಕ್ತವಾಗುತ್ತಿವೆ. ಅಲ್ಲದೇ ಹಿಜಾಬ್ ಬೆಂಬಲಿಸಿ ಮುಸ್ಲಿಂ ಸಂಘಟನೆಗಳು ಬಂದ್ಗೆ ಕೊಟ್ಟಿವೆ. ಇದರಿಂದ ಆಕ್ರೋಶಗೊಂಡ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸದನದಲ್ಲಿ ಈ ಬಗ್ಗೆ ಪ್ರಸ್ತಾಪಿಸಿ ಆಕ್ರೊಶ ಹೊರಹಾಕಿದರು.