Asianet Suvarna News Asianet Suvarna News

ಜೂ.21ರಿಂದ ಅನ್‌ಲಾಕ್; ಇಂದು ಸಂಜೆ ಸಿಎಂ ಸಭೆಯಲ್ಲಿ ನಿರ್ಧಾರ

ರಾಜ್ಯದಲ್ಲಿ ಮಿನಿ ಲಾಕ್‌ಡೌನ್ ಹಂತಹಂತವಾಗಿ ಸಡಿಲಿಸಲು ನಿರ್ಧರಿಸಿರುವ ರಾಜ್ಯ ಸರ್ಕಾರ, 2 ನೇ ಹಂತದ ಅನ್‌ಲಾಕ್‌ ಬಗ್ಗೆ ಇಂದು ಘೋಷಿಸುವ ಸಾಧ್ಯತೆ ಇದೆ ಎಂದು ಗೃಹಸಚಿವ ಬೊಮ್ಮಾಯಿ ಹೇಳಿದ್ದಾರೆ. 

ಬೆಂಗಳೂರು (ಜೂ. 19): ರಾಜ್ಯದಲ್ಲಿ ಮಿನಿ ಲಾಕ್‌ಡೌನ್ ಹಂತಹಂತವಾಗಿ ಸಡಿಲಿಸಲು ನಿರ್ಧರಿಸಿರುವ ರಾಜ್ಯ ಸರ್ಕಾರ, 2 ನೇ ಹಂತದ ಅನ್‌ಲಾಕ್‌ ಬಗ್ಗೆ ಇಂದು ಘೋಷಿಸುವ ಸಾಧ್ಯತೆ ಇದೆ ಎಂದು ಗೃಹಸಚಿವ ಬೊಮ್ಮಾಯಿ ಹೇಳಿದ್ದಾರೆ. 

ಇಂದು ಸಂಜೆ 5.30ಕ್ಕೆ ಕಾವೇರಿ ನಿವಾಸದಲ್ಲಿ ಸಚಿವರು ಮತ್ತು ಹಿರಿಯ ಅಧಿಕಾರಿಗಳ ಜತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸಭೆ ಕರೆದಿದ್ದಾರೆ. ಸಭೆಯಲ್ಲಿ ಎರಡನೇ ಹಂತದಲ್ಲಿ ಯಾವುದಕ್ಕೆಲ್ಲಾ ಅನುಮತಿ ನೀಡಬೇಕು ಮತ್ತು ಯಾವ ನಿರ್ಬಂಧಗಳಿಗೆ ಸಡಿಲಿಕೆ ನೀಡಬೇಕು ಎಂಬುದರ ಕುರಿತು ವಿಸ್ತೃತವಾಗಿ ಚರ್ಚೆ ನಡೆಸಲಿದ್ದಾರೆ. ಸುದೀರ್ಘವಾಗಿ ಚರ್ಚೆ ನಡೆಸಿದ ಬಳಿಕ ಅನ್‌ಲಾಕ್‌ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಪ್ರಕಟಿಸಲಿದ್ದಾರೆ.

Video Top Stories