Asianet Suvarna News Asianet Suvarna News

Horticulture : ರೈತರ ಸೇವೆ ಮಾಡುವಂತೆ ನೂತನ ಸಹಾಯಕ ಅಧಿಕಾರಿಗಳಿಗೆ ಮುನಿರತ್ನ ಕಿವಿಮಾತು

ತೋಟಗಾರಿಕಾ (Horticulture) ಇಲಾಖೆಯ ಸಹಾಯಕ ತೋಟಗಾರಿಕಾ ಅಧಿಕಾರಿಯ ಹುದ್ದೆಗೆ ನೇರ ನೇಮಕಾತಿ ಮಾಡಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಆದೇಶ ಪತ್ರವನ್ನು ತೋಟಗಾರಿಕಾ ಇಲಾಖೆ ಸಚಿವ ಮುನಿರತ್ನ ನೀಡಿದರು. 

ಬೆಂಗಳೂರು (ಜ. 29): ತೋಟಗಾರಿಕಾ (Horticulture) ಇಲಾಖೆಯ ಸಹಾಯಕ ತೋಟಗಾರಿಕಾ ಅಧಿಕಾರಿಯ ಹುದ್ದೆಗೆ ನೇರ ನೇಮಕಾತಿ ಮಾಡಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಆದೇಶ ಪತ್ರವನ್ನು ತೋಟಗಾರಿಕಾ ಇಲಾಖೆ ಸಚಿವ ಮುನಿರತ್ನ ನೀಡಿದರು. 

ದೇಶಕ್ಕೆ ಅನ್ನ ನೀಡುವ ರೈತರಿಗೆ ಸರ್ಕಾರಿ ಸೌಲಭ್ಯಗಳನ್ನು ಕಲ್ಪಿಸುವ ಪ್ರಕ್ರಿಯೆಯಲ್ಲಿ ವಿನಾಕಾರಣ ವಿಳಂಬ ಧೋರಣೆ ಅನುಸರಿಸದೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಬೇಕು ಎಂದು ನೂತನವಾಗಿ ನೇಮಕವಾಗಿರುವ ಸಹಾಯಕ ತೋಟಗಾರಿಕಾ ಅಧಿಕಾರಿಗಳಿಗೆ ತೋಟಗಾರಿಕಾ ಇಲಾಖೆ ಸಚಿವ ಮುನಿರತ್ನ ಕರೆ ನೀಡಿದರು. 

ಪ್ರತಿಯೊಬ್ಬರಿಗೂ ಸರ್ಕಾರಿ ಸೇವೆ ಲಭ್ಯವಾಗುವುದಿಲ್ಲ. ಸರ್ಕಾರಿ ಸೇವೆಗೆ ಸೇರುವವರಲ್ಲಿ ಸೇವಾ ಮಾನೋಭಾವ ಇರಬೇಕು. ದೇಶದ ಬೆನ್ನೆಲುಬಾಗಿರುವ ರೈತರ ಸೇವೆ ಮಾಡಲು ನಿಮಗೆ ಅವಕಾಶ ಸಿಕ್ಕಿದೆ. ಅವರಿಗೆ ನೋವಾಗದಂತೆ ನಡೆದುಕೊಳ್ಳಬೇಕು. ರೈತರು ವರ್ಷ ಪೂರ್ತಿ ದುಡಿದರೂ ಕೆಲ ಸಂದರ್ಭಗಳಲ್ಲಿ ನಿರೀಕ್ಷಿತ ಲಾಭ ಸಿಗುವುದಿಲ್ಲ. ಅವರ ಜೀವನದಲ್ಲಿನ ಕಷ್ಟಗಳನ್ನು ಅಧಿಕಾರಿಗಳು ಅರಿತುಕೊಳ್ಳಬೇಕು. ಅವರನ್ನು ತಮ್ಮ ಸ್ವಂತ ಕುಟುಂಬದ ಸದಸ್ಯರಂತೆ ಪರಿಗಣಿಸಿ ಸೇವೆ ಮಾಡಬೇಕು ಎಂದರು.

Video Top Stories