ಹೊಸೂರಿನ ಬದಲು ಬೆಂಗಳೂರು ಗ್ರಾಮಾಂತರಕ್ಕೆ ಮೆಟ್ರೋ ಕಲ್ಪಿಸಲಿ: ಕರವೇ ಪ್ರವೀಣ್ ಕುಮಾರ್

ಬೊಮ್ಮಸಂದ್ರ-ಹೊಸೂರು ಮೆಟ್ರೋ ಅಧ್ಯಯನಕ್ಕೆ ಟೆಂಡರ್‌ ಕರೆಯಲು ಮುಂದಾಗಿದ್ದು, ಇದಕ್ಕೆ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಖಂಡಿಸಿದ್ದಾರೆ. 
 

Share this Video
  • FB
  • Linkdin
  • Whatsapp

ಬೆಂಗಳೂರು (ಆ.04): ಬೊಮ್ಮಸಂದ್ರ-ಹೊಸೂರು ಮೆಟ್ರೋ ಅಧ್ಯಯನಕ್ಕೆ ಟೆಂಡರ್‌ ಕರೆಯಲು ಮುಂದಾಗಿದ್ದು, ಇದಕ್ಕೆ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಖಂಡಿಸಿದ್ದಾರೆ. ಬೊಮ್ಮಸಂದ್ರ - ಹೊಸೂರು ಮೆಟ್ರೋ ಆಗುವುದಕ್ಕೆ ಬಿಡೋದಿಲ್ಲ. ಒಂದು ವೇಳೆ ಮೆಟ್ರೋ ಆದರೆ ತಮಿಳರಿಗೆ ರೆಡ್ ಕಾರ್ಪೆಟ್ ಹಾಸಿದ ಹಾಗಾಗುತ್ತೆ. ನಾವು ಕನ್ನಡಿಗರು ಯಾರೂ ಕೆಲಸ ಅರಸಿ ಹೊಸೂರಿಗೆ ಹೋಗೋದಿಲ್ಲ. ಈಗಾಗಲೇ ಬೆಂಗಳೂರಿನಲ್ಲಿ ತಮಿಳರ ಸಂಖ್ಯೆ ಜಾಸ್ತಿಯಾಗಿದೆ. ನಮ್ಮ ಉದ್ಯೋಗವನ್ನು ಕಿತ್ತುಕೊಳ್ತಿದಾರೆ. ನಮಗೆ ಕಾವೇರಿ ನೀರಿನ ವಿಚಾರದಲ್ಲಿ ತಗಾದೆ ತೆಗೆದವರು ತಮಿಳರು. ಅವರಿಗೆ ನಾವ್ಯಾಕೆ ಮೆಟ್ರೋ ಮಾಡೋಕೆ ಬಿಡ್ಬೇಕು?

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಅಲ್ಲಿ ಮಾಡೋ ಬದಲು ಬೆಂಗಳೂರಿನ ಗ್ರಾಮಾಂತರ ಪ್ರದೇಶಗಳಲ್ಲಿ ಮೆಟ್ರೋ ಸೇವೆ ಕಲ್ಪಿಸಲಿ. ನಮ್ಮ ಕನ್ನಡಿಗರಿಗೆ ಇದರಿಂದ ಉಪಯೋಗ ಆಗುತ್ತೆ. ದೇವನಹಳ್ಳಿ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ ಭಾಗದಿಂದ ಬರುವವರಿಗೆ ಇದರಿಂದ ಸಹಾಯ ಆಗುತ್ತೆ. ಕೇಂದ್ರ ಸರ್ಕಾರ ಈ ತರಹದ ನೀತಿಗಳಿಂದ ಈಗಾಗಲೇ ರಾಜ್ಯದಲ್ಲಿ ಅಧಿಕಾರ ಕಳೆದುಕೊಂಡಿದೆ. ಒಂದು ವೇಳೆ ಮೆಟ್ರೋಗೆ ಅನುಮೋದನೆ ಕೊಟ್ರೆ ತಮಿಳು ನಟರ ಹೆಸರನ್ನೇ ಮೆಟ್ರೋ ಸ್ಟೇಷನ್‌ಗೆ ಇಡ್ತಾರೆ. ಅವರ ಬ್ಯಾನರ್‌ಗಳನ್ನೇ ನಾವು ನೋಡ್ಬೇಕಾಗುತ್ತೆ. ಈ ಬಗ್ಗೆ ಸಂಸದರನ್ನು, ಮುಖ್ಯಮಂತ್ರಿಗಳನ್ನು ಭೇಟಿಯಾಗಿ ನಾವು ಮನವಿ ಮಾಡ್ತೇವೆ. ಇದರ ಜೊತೆಗೆ ಕರವೇ ಕಡೆಯಿಂದ ಉಗ್ರ ಹೋರಾಟ ಮಾಡುತ್ತೇವೆ ಎಂದು ಪ್ರವೀಣ್ ಕುಮಾರ್ ಶೆಟ್ಟಿ ಹೇಳಿದರು.

Related Video