ಸಂತೋಷ್ ಆತ್ಮಹತ್ಯೆ ಕೇಸ್‌ಗೆ ಸ್ನೇಹಿತನಿಂದ ಟ್ವಿಸ್ಟ್, ತೀವ್ರಗೊಂಡ ತನಿಖೆ

 ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ (Santosh Suicide Case) ಪ್ರಕರಣ ಬೇರೆ ಬೇರೆ ಆಯಾಮ ಪಡೆದಿದೆ. ಸಂತೋಷ್ ಓಡಾಡಿದ ಸ್ಥಳಗಳಲ್ಲಿ ಖಾಕಿ ಮಹಜರು ನಡೆಸಿದೆ. ತನಿಖೆ ತೀವ್ರಗೊಂಡಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಏ. 16): ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ (Santosh Suicide Case) ಪ್ರಕರಣ ಬೇರೆ ಬೇರೆ ಆಯಾಮ ಪಡೆದಿದೆ. ಸಂತೋಷ್ ಓಡಾಡಿದ ಸ್ಥಳಗಳಲ್ಲಿ ಖಾಕಿ ಮಹಜರು ನಡೆಸಿದೆ. ತನಿಖೆ ತೀವ್ರಗೊಂಡಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈಶ್ವರಪ್ಪ ಬಂಧನ ಆಗ್ರಹಿಸಿ ಕಾಂಗ್ರೆಸ್ ರಾಜ್ಯವ್ಯಾಪಿ ಪ್ರತಿಭಟನೆ: ಶಿವಮೊಗ್ಗದಲ್ಲಿ ಡಿಕೆಶಿ ನೇತೃತ್ವ!

 ಸಂತೋಷ್ ಮೃತದೇಹ ಪತ್ತೆಯಾಗಿದ್ದ ಲಾಡ್ಜ್‌ನಲ್ಲಿ ನಿಷೇಧಿತ ಮೋನೋಕ್ರೋಟೋಫೋಸ್ ಕೀಟನಾಶಕ ಪತ್ತೆಯಾಗಿದ್ದು, ಆತ್ಮಹತ್ಯೆಗೂ ಮುನ್ನ ಸಂತೋಷ್ ಇದನ್ನು ಸೇವಿಸಿದ್ದರೇ ಎಂಬ ಅನುಮಾನ ಮೂಡಿಸಿದೆ.

ಉಡುಪಿಯ (Udupi) ಲಾಡ್ಜ್‌ಗೆ ಬರುವ ಮುನ್ನ ಸಂತೋಷ್ ಚಿಕ್ಕಮಗಳೂರಿನಿಂದ (Chikkamagaluru) ವಿಷ ಖರೀದಿಸಿ ತಂದಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಸಂತೋಷ್‌ ಆತ್ಮಹತ್ಯೆ ಪ್ರಕರಣ ಬೇಧಿಸಲು ಪೊಲೀಸರು ನಾಲ್ಕು ತಂಡ​ಗ​ಳನ್ನು ರಚಿ​ಸಿ​ದ್ದಾ​ರೆ. ಉಡುಪಿಗೆ ಬರುವ ಮೊದಲು ಚಿಕ್ಕಮಗಳೂರು ಮತ್ತು ದಾವಣಗೆರೆಗಳಿಗೆ (Davanagere) ತೆರಳಿ ಅಲ್ಲಿ ಹೋಮ್‌ ಸ್ಟೇಗಳಲ್ಲಿ ಉಳಿದುಕೊಂಡಿರುವುದಾಗಿ ಸಂತೋ​ಷ್‌​ನೊಂದಿಗೆ ಉಡುಪಿಗೆ ಬಂದಿದ್ದ ಸ್ನೇಹಿ​ತ​ರಾದ ಮೇದಪ್ಪ ಮತ್ತು ಪ್ರಶಾಂತ್‌ ಶೆಟ್ಟಿಬಾಯ್ಬಿಟ್ಟಿದ್ದಾರೆ. 

Related Video