IPS ಅಧಿಕಾರಿ ಅಜಯ್ ಹಿಲೋರಿಗೆ ಕೊರೋನಾ ಶಾಕ್
KSRP ಸೋಂಕಿತ ಸಿಬ್ಬಂದಿಯ ಸಂಪರ್ಕದಿಂದಾಗಿ ಅಜಯ್ ಹಿಲೋರಿಗೆ ಕೊರೋನಾ ಸೋಂಕು ಅಂಟಿದೆ. ಇತ್ತೀಚಿನ ದಿನಗಳಲ್ಲಿ ಕೊರೋನಾ ವಾರಿಯರ್ಸ್ಗೆ ಹೆಚ್ಚು ಹೆಚ್ಚು ಸೋಂಕು ತಗುಲುತ್ತಿರುವುದು ಆತಂಕಕ್ಕೆ ಈಡು ಮಾಡಿಕೊಟ್ಟಿದೆ.
ಬೆಂಗಳೂರು(ಜೂ.24): ರಾಜ್ಯದಲ್ಲಿ ಕೊರೋನಾ ಹೆಮ್ಮಾರಿಯ ಅಟ್ಟಹಾಸ ಜೋರಾಗಿದ್ದು, KSRP ಕಮಾಂಡೆಂಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ IAS ಅಧಿಕಾರಿ ಅಜಯ್ ಹಿಲೋರಿಗೆ ಕೋವಿಡ್ 19 ಸೋಂಕು ತಗುಲಿರುವುದು ದೃಢಪಟ್ಟಿದೆ.
KSRP ಸೋಂಕಿತ ಸಿಬ್ಬಂದಿಯ ಸಂಪರ್ಕದಿಂದಾಗಿ ಅಜಯ್ ಹಿಲೋರಿಗೆ ಕೊರೋನಾ ಸೋಂಕು ಅಂಟಿದೆ. ಇತ್ತೀಚಿನ ದಿನಗಳಲ್ಲಿ ಕೊರೋನಾ ವಾರಿಯರ್ಸ್ಗೆ ಹೆಚ್ಚು ಹೆಚ್ಚು ಸೋಂಕು ತಗುಲುತ್ತಿರುವುದು ಆತಂಕಕ್ಕೆ ಈಡು ಮಾಡಿಕೊಟ್ಟಿದೆ.
ಗುರುವಾರ ಕ್ಯಾಬಿನೇಟ್ ಮೀಟಿಂಗ್: ಮತ್ತೆ ಬೆಂಗ್ಳೂರಲ್ಲಿ ಲಾಕ್ಡೌನ್ ಜಾರಿ?
ಈಗಾಗಲೇ KSRPಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹಲವು ಪೊಲೀಸ್ ಸಿಬ್ಬಂದಿಗೆ ಕೊರೋನಾ ಸೋಂಕು ಬಂದಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂದರ್ಭದಲ್ಲಿ ಅವರ ಸಂಪರ್ಕದಿಂದಾಗಿ KSRP ಕಮಾಂಡೆಂಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಅಜಯ್ ಹಿಲೋರಿಗೆ ಸೋಂಕು ತಗುಲಿರುವ ಸಾಧ್ಯತೆಯಿದೆ ಎನ್ನಲಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.