ಏಸು ಪ್ರತಿಮೆ ವಿವಾದ: ಹಿಂದೂ ಸಂಘಟನೆಗಳಿಂದ ಕನಕಪುರ ಚಲೋ
ಕನಕಪುರದ ಹಾರೊಬೆಲೆಯ ಕಪಾಲ ಬೆಟ್ಟದಲ್ಲಿ ನಿರ್ಮಾಣವಾಗಿರುವ ಏಸು ಪ್ರತಿಮೆ ವಿವಾದ ಈಗ ತೀವ್ರ ಸ್ವರೂಪ ಪಡೆದಿದೆ. ಹಿಂದೂ ಸಂಘಟನೆಗಳು ಕನಕಪುರ ಚಲೋ ಹಮ್ಮಿಕೊಂಡಿವೆ.
ರಾಮನಗರ (ಜ.13): ಕನಕಪುರದ ಹಾರೊಬೆಲೆಯ ಕಪಾಲ ಬೆಟ್ಟದಲ್ಲಿ ನಿರ್ಮಾಣವಾಗಿರುವ ಏಸು ಪ್ರತಿಮೆ ವಿವಾದ ಈಗ ತೀವ್ರ ಸ್ವರೂಪ ಪಡೆದಿದೆ. ಹಿಂದೂ ಸಂಘಟನೆಗಳು ಕನಕಪುರ ಚಲೋ ಹಮ್ಮಿಕೊಂಡಿವೆ.
ಕಾಂಗ್ರೆಸ್ ಪ್ರಭಾವಿ ನಾಯಕ ಡಿ.ಕೆ. ಶಿವಕುಮಾರ್ ತನ್ನ ಸ್ವಂತ ಖರ್ಚಿನಿಂದ ನಿರ್ಮಿಸಿರುವ ಏಕಶಿಲಾ ಏಸು ಪ್ರತಿಮೆಯ ಜಾಗ ವಿವಾದದ ಕೇಂದ್ರಬಿಂದುವಾಗಿದೆ. ಆ ಮೂಲಕ ಕ್ರೈಸ್ತ ಮಿಷನರಿಗಳು ಮತಾಂತರದ ಪ್ರಯತ್ನ ನಡೆಸುತ್ತಿದ್ದಾರೆಂದು ಹಿಂದೂ ಸಸಂಘಟನೆಗಳು ಆರೋಪಿಸಿವೆ.