
Karnataka Bandh: ಕನ್ನಡಪರ ಸಂಘಟನೆಗಳಲ್ಲೇ ಭಿನ್ನಾಭಿಪ್ರಾಯ, ಮೂಡದ ಒಮ್ಮತ
ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ, ನಾಡಧ್ವಜ ದಹನ ಮಾಡಿರುವ ಎಂಇಎಸ್ (MES) ಸಂಘಟನೆಯ ನಿಷೇಧಕ್ಕಾಗಿ ಡಿ.31 ರಂದು ಕರೆದಿರುವ ಕರ್ನಾಟಕ ಬಂದ್ ಕೇವಲ ಕನ್ನಡಪರ ಸಂಘಟನೆಗಳ ಬಂದ್ ಅಲ್ಲ, ಇಡೀ ನಾಡಿನ ಸ್ವಾಭಿಮಾನಿ ಕನ್ನಡಿಗರ ಬಂದ್ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಪ್ರವೀಣ್ಕುಮಾರ್ ಶೆಟ್ಟಿ ಹೇಳಿದ್ದಾರೆ.
ಬೆಂಗಳೂರು (ಡಿ. 26): ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ, ನಾಡಧ್ವಜ ದಹನ ಮಾಡಿರುವ ಎಂಇಎಸ್ ಸಂಘಟನೆಯ ನಿಷೇಧಕ್ಕಾಗಿ ಡಿ.31ರಂದು ಕರೆದಿರುವ ಕರ್ನಾಟಕ ಬಂದ್ ಕೇವಲ ಕನ್ನಡಪರ ಸಂಘಟನೆಗಳ ಬಂದ್ ಅಲ್ಲ, ಇಡೀ ನಾಡಿನ ಸ್ವಾಭಿಮಾನಿ ಕನ್ನಡಿಗರ ಬಂದ್ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಪ್ರವೀಣ್ಕುಮಾರ್ ಶೆಟ್ಟಿ ಹೇಳಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
Karnataka Bandh: ನೈತಿಕ ಬೆಂಬಲ ಎಂದ ಸ್ಯಾಂಡಲ್ವುಡ್, ಕನ್ನಡ ಸಂಘಟನೆಗಳ ಆಕ್ರೋಶ
ಆದರೆ ಈ ಬಂದ್ ಬಗ್ಗೆ ಒಂದಷ್ಟು ಗೊಂದಲಗಳಿವೆ. ಕನ್ನಡ ಚಿತ್ರರಂಗ ನೈತಿಕ ಬೆಂಬಲ ನೀಡುವುದಾಗಿ ಹೇಳಿದೆ. ನಮಗೆ ನೈತಿಕ ಬೆಂಬಲ ಬೇಡ, ಬಾಹ್ಯ ಬೆಂಬಲ ಘೋಷಿಸಿ ಎಂದು ಕನ್ನಡಪರ ಸಂಘಟನೆಗಳು ಒತ್ತಾಯಿಸಿವೆ.