ಕರ್ನಾಟಕ ಬಂದ್: ಪ್ರತಿಭಟನಾನಿರತ ಮಹಿಳೆಯರಿಂದ ಬೆಂಗಳೂರು ಏರ್‌ಪೋರ್ಟ್‌ಗೆ ಮುತ್ತಿಗೆ

ರಾಜ್ಯ ರಾಜಧಾನಿಯಲ್ಲಿ ಪ್ರತಿಭಟನೆಯ ಕಾವು ಹೆಚ್ಚಾಗುತ್ತಿದೆ.  ಕರವೇ ಮೆಜೆಸ್ಟಿಕ್‌ಗೆ ಮುತ್ತಿಗೆ ಹಾಕಿದರೆ ರೈತ ಸಂಘಟನೆಗಳು ಬೇರೆ ಬೇರೆ ರಸ್ತೆ ತಡೆ ಮಾಡುತ್ತಿದ್ದಾರೆ. ಮಹಿಳೆಯರು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಮುತ್ತಿಗೆ ಹಾಕಿದ್ದಾರೆ. 

First Published Sep 28, 2020, 10:22 AM IST | Last Updated Sep 28, 2020, 10:25 AM IST

ಬೆಂಗಳೂರು (ಸೆ. 28): ರೈತರ ಹೋರಾಟ ಲೆಕ್ಕಿಸದೇ ಕರಷಿ ಮಸೂದೆ, ಭು ಸುಧಾರಣೆ ಹಾಗೂ ಎಪಿಎಂಸಿ ತಿದ್ದುಪಡಿ ಮಸೂದೆಗಳ ಜಾರಿಗೆ ಹೊರಟಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕ್ರಮ ಖಂಡಿಸಿ ರೈತರು, ಕಾರ್ಮಿಕರು, ದಲಿತ ಸಂಘಟನೆಗಳು ಇಂದು ಕರ್ನಾಟಕ ಬಂದ್‌ಗೆ ಕರೆ ನೀಡಿವೆ. 

ಆಟೋ, ಟ್ಯಾಕ್ಸಿ ಸಿಗಲ್ಲ, ಓಲಾ, ಊಬರ್ ಓಡಾಡಲ್ಲ, ರಸ್ತೆಗಳೆಲ್ಲಾ ಬಂದ್; ಸಾರ್ವಜನಿಕರೇ ಎಚ್ಚರ

ರಾಜ್ಯ ರಾಜಧಾನಿಯಲ್ಲಿ ಪ್ರತಿಭಟನೆಯ ಕಾವು ಹೆಚ್ಚಾಗುತ್ತಿದೆ.  ಕರವೇ ಮೆಜೆಸ್ಟಿಕ್‌ಗೆ ಮುತ್ತಿಗೆ ಹಾಕಿದರೆ ರೈತ ಸಂಘಟನೆಗಳು ಬೇರೆ ಬೇರೆ ರಸ್ತೆ ತಡೆ ಮಾಡುತ್ತಿದ್ದಾರೆ. ಮಹಿಳೆಯರು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಮುತ್ತಿಗೆ ಹಾಕಿದ್ದಾರೆ. ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಏರ್‌ಪೋರ್ಟ್‌ ಸುತ್ತಮುತ್ತ ಬಿಗಿ ಭದ್ರತೆ ಒದಗಿಸಲಾಗಿದೆ. 
 

Video Top Stories