ಸಿಂದಗಿ, ಹಾನಗಲ್ ಮತ ಎಣಿಕೆ: ಮೊದಲ ಅಗ್ನಿಪರೀಕ್ಷೆಯಲ್ಲಿ ಸಿಎಂ ಗೆಲ್ತಾರಾ?
ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾದ ನಂತರ ಎದುರಿಸುತ್ತಿರುವ ಮೊದಲ ಚುನಾವಣೆ ಇದಾಗಿರುವುದರಿಂದ ಸಹಜವಾಗಿ ಎರಡೂ ಕ್ಷೇತ್ರಗಳಲ್ಲಿ ಜಯಭೇರಿ ಭಾರಿಸುವುದು ಬಿಜೆಪಿಗೆ ಪ್ರತಿಷ್ಠೆಯ ವಿಷಯವಾಗಿದೆ.
ಬೆಂಗಳೂರು (ನ.02): ಆಡಳಿತಾರೂಢ ಬಿಜೆಪಿಗೆ ಪ್ರತಿಷ್ಠೆ ಹೆಚ್ಚಾಗುವುದೆ? ಪ್ರತಿಪಕ್ಷ ಕಾಂಗ್ರೆಸ್ಗೆ ಆತ್ಮವಿಶ್ವಾಸ ವೃದ್ಧಿಯಾಗುವುದೆ? ಅಥವಾ ಜೆಡಿಎಸ್ ಪಾಲಿಗೆ ನವ ಚೈತನ್ಯ ಸಿಗುವುದೆ? ರಾಜ್ಯದ ಮೂರೂ ಪ್ರಮುಖ ರಾಜಕೀಯ ಪಕ್ಷಗಳ ಸಾಮರ್ಥ್ಯ ಕುರಿತ ಈ ಪ್ರಶ್ನೆಗಳಿಗೆ ಹಾನಗಲ್ (Hanagal) ಹಾಗೂ ಸಿಂದಗಿ (Sindagi) ವಿಧಾನಸಭಾ ಫಲಿತಾಂಶ ಉತ್ತರ ನೀಡಲಿದೆ.
ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾದ ನಂತರ ಎದುರಿಸುತ್ತಿರುವ ಮೊದಲ ಚುನಾವಣೆ ಇದಾಗಿರುವುದರಿಂದ ಸಹಜವಾಗಿ ಎರಡೂ ಕ್ಷೇತ್ರಗಳಲ್ಲಿ ಜಯಭೇರಿ ಭಾರಿಸುವುದು ಬಿಜೆಪಿಗೆ ಪ್ರತಿಷ್ಠೆಯ ವಿಷಯವಾಗಿದೆ.