Asianet Suvarna News Asianet Suvarna News

Cabinet Expansion: ಕ್ಯಾಬಿನೆಟ್ ವಿಸ್ತರಣೆ ಬಗ್ಗೆ ಬಿಎಸ್‌ವೈ ಸುಳಿವು, ಯಾರಿಗೆ ಅದೃಷ್ಟ.?

ಸಿಎಂ ಬೊಮ್ಮಾಯಿ (Basavaraj Bommai) ದೆಹಲಿಯಿಂದ (New Delhi) ವಾಪಸ್ಸಾಗಿದ್ದಾರೆ. ಸಚಿವಾಕಾಂಕ್ಷಿಗಳಲ್ಲಿ ಹೊಸ ಹುರುಪು ಮೂಡಿದೆ. ರಾಜ್ಯ ಸಚಿವ ಸಂಪುಟ ಸದ್ಯದಲ್ಲೇ ವಿಸ್ತರಣೆಯಾಗುವ ಕುರಿತು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ (BS Yediyurappa) ಸುಳಿವು ನೀಡಿದ್ದಾರೆ.  

ಬೆಂಗಳೂರು (ಡಿ. 05): ಸಿಎಂ ಬೊಮ್ಮಾಯಿ (Basavaraj Bommai) ದೆಹಲಿಯಿಂದ (New Delhi) ವಾಪಸ್ಸಾಗಿದ್ದಾರೆ. ಸಚಿವಾಕಾಂಕ್ಷಿಗಳಲ್ಲಿ ಹೊಸ ಹುರುಪು ಮೂಡಿದೆ. ರಾಜ್ಯ ಸಚಿವ ಸಂಪುಟ ಸದ್ಯದಲ್ಲೇ ವಿಸ್ತರಣೆಯಾಗುವ ಕುರಿತು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ (BS Yediyurappa) ಸುಳಿವು ನೀಡಿದ್ದಾರೆ.  

Asianet Suvarna Special: ಮೋದಿ ಜೊತೆ ದೋಸ್ತಿ, ಸಿದ್ದು ಜೊತೆ ಕುಸ್ತಿ.. ಏನಿದು ದಳಪತಿಗಳ ನಿಗೂಢ ದಾಳ?

ಸಂಪುಟ ವಿಸ್ತರಣೆಯಾಗುವ (Cabinet Expansion)ನಿರೀಕ್ಷೆ ಇದೆ. ಆದರೆ ಸಂಪುಟಕ್ಕೆ ಯಾರನ್ನು ತೆಗೆದುಕೊಳ್ಳಬೇಕು ಎಂಬುದನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ತೀರ್ಮಾನಿಸುತ್ತಾರೆ ಎಂದು ಅವರು ತಿಳಿಸಿದ್ದಾರೆ.

ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ಅವರು ಮೊದಲಿಗೆ 29 ಸಚಿವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಂಡಿದ್ದರು. ಆ ಬಳಿಕ ಬೊಮ್ಮಾಯಿ ಅವರು ದೆಹಲಿಗೆ ಭೇಟಿ ಕೊಟ್ಟಾಗಲೆಲ್ಲ ಸಂಪುಟ ವಿಸ್ತರಣೆಯ ಮಾತುಗಳು ಕೇಳಿಬರುತ್ತಲೇ ಇದ್ದವು. ಇದೀಗ ಸ್ವತಃ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಹಿರಂಗವಾಗಿಯೇ ಈ ವಿಚಾರ ಪ್ರಸ್ತಾಪಿಸಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ