ಟೀಕೆಗಳನ್ನು ಮೆಟ್ಟಿಲು ಮಾಡಿಕೊಂಡು ಅಭಿವೃದ್ಧಿ ಮಾಡುತ್ತೇನೆ: ಸಿಎಂ ಬೊಮ್ಮಾಯಿ
- ನನ್ನ ಬಗ್ಗೆ ಹಲವಾರು ಅನುಮಾನಗಳಿವೆ. ನನ್ನ ಬಗ್ಗೆ ಟೀಕೆಗಳನ್ನು ಮಾಡುತ್ತಿದ್ದಾರೆ
- ಟೀಕೆಗಳು ನನಗೆ ಆಶೀರ್ವಾದವಿದ್ದಂತೆ
- ಟೀಕೆಗಳನ್ನು ಮೆಟ್ಟಿಲಾಗಿಸಿಕೊಂಡು ಅಭಿವೃದ್ಧಿ ಕೆಲಸಗಳನ್ನು ಮಾಡುತ್ತೇನೆ: ಸಿಎಂ ಬೊಮ್ಮಾಯಿ
ಬೆಂಗಳೂರು (ಆ. 15): 'ನನ್ನ ಬಗ್ಗೆ ಹಲವಾರು ಅನುಮಾನಗಳಿವೆ. ನನ್ನ ಬಗ್ಗೆ ಟೀಕೆಗಳನ್ನು ಮಾಡುತ್ತಿದ್ದಾರೆ. ಅವೆಲ್ಲವೂ ಕೂಡಾ ನನಗೆ ಆಶೀರ್ವಾದ. ಅನುಮಾನಗಳನ್ನು ಸ್ಫೂರ್ತಿಯಾಗಿ ತೆಗೆದುಕೊಂಡು, ಅವುಗಳನ್ನೇ ಮೆಟ್ಟಿಲಾಗಿಸಿಕೊಂಡು ಅಭಿವೃದ್ಧಿ ಕೆಲಸಗಳನ್ನು ಮಾಡುತ್ತೇನೆ. ಅದಕ್ಕೆ ಬೇಕಾದ ಆತ್ಮವಿಶ್ವಾಸವನ್ನು ಹೊಂದಿದ್ದೇನೆ' ಎಂದು ಸಿಎಂ ಬೊಮ್ಮಾಯಿ ಸ್ವಾತಂತ್ರೋತ್ಸವದ ಭಾಷಣದಲ್ಲಿ ಹೇಳಿದ್ದಾರೆ.
ಬೊಮ್ಮಾಯಿ ಸಾಹೇಬ್ರು ಕ್ಯಾಪ್ಟನ್, 29 ಪ್ಲೇಯರ್ಸ್, ನೋಡುವವರು ಕರ್ನಾಟಕದ 7 ಕೋಟಿ ಜನ!