ಬಿಎಸ್ವೈಗೆ ಸಂಪುಟ ದರ್ಜೆ ಸ್ಥಾನಮಾನ, ಕಾವೇರಿ ನಿವಾಸದಲ್ಲೇ ವಾಸ್ತವ್ಯ
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಚಿವ ಸಂಪುಟ ದರ್ಜೆಯ ಸಚಿವ ಸ್ಥಾನಮಾನ ನೀಡಿ ಸರ್ಕಾರ ಆದೇಶಿಸಿದೆ.
ಬೆಂಗಳೂರು (ಆ. 08): ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಚಿವ ಸಂಪುಟ ದರ್ಜೆಯ ಸಚಿವ ಸ್ಥಾನಮಾನ ನೀಡಿ ಸರ್ಕಾರ ಆದೇಶಿಸಿದೆ.
ಕಾನೂನಿನಲ್ಲಿ ಇದಕ್ಕೆ ಅವಕಾಶ ಇರುವ ಕಾರಣ ಯಡಿಯೂರಪ್ಪ ಅವರಿಗೆ ಸಚಿವ ಸಂಪುಟ ದರ್ಜೆಯ ಸಚಿವರಿಗೆ ಕಲ್ಪಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಕಾವೇರಿ ನಿವಾಸದಲ್ಲಿಯೇ ಯಡಿಯೂರಪ್ಪ ವಾಸ್ತವ್ಯ ಮುಂದುವರಿಯಲಿದೆ. ಸರ್ಕಾರಿ ವಾಹನ ಸೇರಿದಂತೆ ಎಲ್ಲ ರೀತಿಯ ಸರ್ಕಾರಿ ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ.