
ಧನದಾಹಿ ಆಸ್ಪತ್ರೆಗಳಿಗೆ ಬ್ರೇಕ್; ಅಧಿಕಾರಿಗಳಿಗೆ ಸೋಂಕಿತರಿಂದ ಧನ್ಯವಾದ
ಕ್ರಿಮಿನಲ್ ಕೇಸ್ ದಾಖಲಿಸುವುದಾಗಿ ಹಿರಿಯ ಐಎಎಸ್ ಅಧಿಖಾರಿ ಹರ್ಷಗುಪ್ತ ಮತ್ತು ಐಜಿಪಿ ಡಿ ರೂಪಾ ನೇತೃತ್ವದ ತಂಡ ಎಚ್ಚರಿಕೆ ನೀಡಿದ ಬೆನ್ನಲ್ಲೇ ಕೊರೊನಾ ಚಿಕಿತ್ಸೆ ಸಲುವಾಗಿ 22 ಮಂದಿ ಸೋಂಕಿತರಿಂದ ಹೆಚ್ಚುವರಿಯಾಗಿ ಪಡೆದಿದ್ದ 24 ಲಕ್ಷ ರೂ ಹಣವನ್ನು ರಾಜರಾಜೇಶ್ವರಿ ನಗರ ಸಮೀಪದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯೊಂದು ಸೋಮವಾರ ಮರಳಿಸಿದೆ.
ಬೆಂಗಳೂರು (ಜು. 28): ಕ್ರಿಮಿನಲ್ ಕೇಸ್ ದಾಖಲಿಸುವುದಾಗಿ ಹಿರಿಯ ಐಎಎಸ್ ಅಧಿಖಾರಿ ಹರ್ಷಗುಪ್ತ ಮತ್ತು ಐಜಿಪಿ ಡಿ ರೂಪಾ ನೇತೃತ್ವದ ತಂಡ ಎಚ್ಚರಿಕೆ ನೀಡಿದ ಬೆನ್ನಲ್ಲೇ ಕೊರೊನಾ ಚಿಕಿತ್ಸೆ ಸಲುವಾಗಿ 22 ಮಂದಿ ಸೋಂಕಿತರಿಂದ ಹೆಚ್ಚುವರಿಯಾಗಿ ಪಡೆದಿದ್ದ 24 ಲಕ್ಷ ರೂ ಹಣವನ್ನು ರಾಜರಾಜೇಶ್ವರಿ ನಗರ ಸಮೀಪದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯೊಂದು ಸೋಮವಾರ ಮರಳಿಸಿದೆ.
Add Asianetnews Kannada as a Preferred Source

ಸರ್ಕಾರದ ನಿಗದಿತ ದರಕ್ಕಿಂತ ಹೆಚ್ಚಿನ ಹಣ ಸುಲಿಗೆ ಮಾಡಿದರೆ ಕಠಿಣ ಕ್ರಮ ಜರುಗಿಸಲಾಗುತ್ತದೆ ಎಂದು ರೂಪಾ ಎಚ್ಚರಿಕೆ ನೀಡಿದ್ದಾರೆ. ಅಧಿಕಾರಿಗಳಿಗೆ ಸೋಂಕಿತರು, ಗುಣಮುಖರಾದವರು ಧನ್ಯವಾದಗಳನ್ನು ತಿಳಿಸಿದ್ಧಾರೆ.
ಐಜಿಪಿ ರೂಪಾ ಖಡಕ್ ವಾರ್ನಿಂಗ್ ಬೆಚ್ಚಿದ ಖಾಸಗಿ ಆಸ್ಪತ್ರೆ: 24 ಲಕ್ಷ ರೂ ವಾಪಸ್!