
ಕರ್ನಾಟಕದ ಹಿಜಾಬ್ ನಿಷೇಧ ವಾಪಸ್ ಪಡೆಯುತ್ತೇವೆ, ಸಿಎಂ ಸಿದ್ದರಾಮಯ್ಯ ಘೋಷಣೆ!
ಹಿಂದಿನ ಬಿಜೆಪಿ ಸರ್ಕಾರದ ವೇಳೆ ಹಿಜಾಬ್ ವಿಚಾರ ದೇಶಾದ್ಯಂತ ಭಾರಿ ಗದ್ದಲ ಸೃಷ್ಟಿಸಿತ್ತು. ಬಳಿಕ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತ್ತು. ಆಯಾ ಶಾಲಾ ಕಾಲೇಜು ನಿರ್ಧರಿಸಿದ ಸಮವಸ್ತ್ರದಲ್ಲೇ ವಿದ್ಯಾರ್ಥಿಗಳು ತರಗತಿಗೆ ಹಾಜರಾಗಬೇಕು ಎಂದು ಕೋರ್ಟ್ ಸೂಚಿಸಿತ್ತು. ಇದೀಗ ಕರ್ನಾಟಕದಲ್ಲಿ ಹಿಜಾಬ್ ನಿಷೇಧ ಆದೇಶವನ್ನು ವಾಪಸ್ ಪಡೆಯುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರು(ಡಿ.22) ಕರ್ನಾಟದ ಉಡುಪಿಯಿಂದ ಆರಂಭಗೊಂಡಿದ್ದ ಹಿಜಾಬ್ ಹೋರಾಟ ದೇಶಾದ್ಯಂತ ಭಾರಿ ಪ್ರತಿಭಟನೆ, ಹೋರಾಟಕ್ಕೆ ಕಾರಣವಾಗಿತ್ತು. ಈ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಕೋರ್ಟ್, ಹಿಜಾಬ್ ಇಸ್ಲಾಂ ಧರ್ಮದ ಕಡ್ಡಾಯವಲ್ಲ. ಶಾಲಾ ಕಾಲೇಜು ಆಡಳಿತ ಮಂಡಳಿ ನಿರ್ಧರಿಸಿದ ಸಮವಸ್ತ್ರ ಧರಿಸಬೇಕು ಎಂದು ಸೂಚಿಸಿತ್ತು. ಹಿಂದಿನ ಬಿಜೆಪಿ ಸರ್ಕಾರದ ವೇಳೆ ನಡೆದ ಈ ಹಿಜಾಬ್ ಗಲಾಟೆ ರಾಜಕೀಯ ಗುದ್ದಾಟಕ್ಕೂ ಕಾರಣಾಗಿತ್ತು. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಹಿಜಾಬ್ ನಿಷೇಧ ಆದೇಶ ವಾಪಸ್ ಪಡೆಯುತ್ತೇವೆ ಎಂದಿದ್ದಾರೆ.