ಗ್ಯಾರಂಟಿ ಪರಿಷ್ಕರಣೆ: ಕಾಕಾ ಪಾಟೀಲ್, ಮಹದೇವಪ್ಪಗೂ ಫ್ರೀ ಇಲ್ವಾ?

ಅಭಿವೃದ್ಧಿ ಅನುದಾನಕ್ಕಾಗಿ ಪಂಚ ಗ್ಯಾರಂಟಿಗಳಿಗೆ ಪರಿಷ್ಕರಣೆ ಮಾಡುವ ಸಾಧ್ಯತೆ ಇದೆ. ಹೈಕಮಾಂಡ್​ ಎದುರು ಸಚಿವರು, ಶಾಸಕರ ಈ ಕುರಿತು ಬಿಗಿಪಟ್ಟು ಹಿಡಿದಿದ್ದಾರೆ. ಸಿಎಂ ಹೇಳಿದಂತೆ ಕಾಕಾ ಪಾಟೀಲ್​, ಮಹದೇವಪ್ಪಗೆ ಫ್ರೀ ಇರಲ್ವಾ ಎನ್ನುವ ಪ್ರಶ್ನೆಗಳು ಎದ್ದಿದೆ.
 

Share this Video
  • FB
  • Linkdin
  • Whatsapp

ಬೆಂಗಳೂರು (ಆ.14): ಕಳೆದ ವರ್ಷ ಚುನಾವಣೆಗೂ ಪೂರ್ವ ಭಾಷಣದಲ್ಲಿ ಕಾಂಗ್ರೆಸ್‌ ನಾಯಕರು ಮನೆಯ ಗಲ್ಲಿ ಗಲ್ಲಿಗಳಿಗೆ ಗ್ಯಾರಂಟಿ ಸ್ಕೀಮ್‌ನ ಕರಪತ್ರಗಳು ಹಂಚಿ ಬಂದಿದ್ದರು. ಇನ್ನೊಂದೆಡೆ ಸ್ವತಃ ಸಿಎಂ ವೇದಿಕೆ ಮೇಲೆ ನಿಂತು, ಕಾಕಾಪಾಟೀಲ್‌ಗೂ ಫ್ರೀ, ಮಹದೇವಪ್ಪ ನಿಂಗೂ ಫ್ರೀ ಎಂದು ಹೇಳಿದ ಮಾತು ಗ್ಯಾರಂಟಿ ಪ್ರಚಾರದಲ್ಲಿ ವೈರಲ್‌ ಆಗಿದ್ದವು.

ಆದರೆ, ಈಗ ಗ್ಯಾರಂಟಿ ಸ್ಕೀಮ್‌ಗೆ ಎಕ್ಸ್‌ಪೈರಿ ಸಮಯ ಹತ್ತಿರ ಬಂದಿದೆ. ಅನ್ನಭಾಗ್ಯ, ಗೃಹಲಕ್ಷ್ಮೀ, ಯುವನಿಧಿ, ಗೃಹಜ್ಯೋತಿ ಹಾಗೂ ಶಕ್ತಿ ಯೋಜನೆಗಳನ್ನ ಪರಿಷ್ಕರಣೆ ಮಾಡುವಂತೆ ಸಚಿವರೇ ಸರ್ಕಾರವನ್ನು ಒತ್ತಾಯ ಮಾಡಿದ್ದಾರೆ ಎಂದು ವರದಿಯಾಗಿದೆ. ಅದಕ್ಕೆ ಕಾರಣ, ಯಾವುದೇ ಕೆಲಸಕ್ಕೂ ಅನುದಾನ ಇಲ್ಲದೆ ಇರುವುದು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕಾಂಗ್ರೆಸ್ ಗ್ಯಾರಂಟಿಗೆ ಎಕ್ಸ್ ಪೈರಿ.? ರಾಜ್ಯದಲ್ಲಿ ಗ್ಯಾರಂಟಿಗಳಿಗೆ ಕಾಂಗ್ರೆಸ್ ಕತ್ತರಿ..! JDS-BJP ಟೀಕೆ

ಅನ್ನಭಾಗ್ಯ, ಗೃಹ ಲಕ್ಷ್ಮಿಯೋಜನೆ ಪರಿಷ್ಕರಣೆ ಚಿಂತನೆ ನಡೆದಿದೆ. ಎಪಿಎಲ್, ಬಿಪಿಎಲ್​ ಕಾರ್ಡ್​ ಪರಿಷ್ಕರಣೆಗೆ ನಿರ್ಧಾರ. ಬಿಪಿಎಲ್​ ಕಾರ್ಡ್​ದಾರಿಗೆ ಪೂರ್ತಿ ಸಬ್ಸಿಡಿ ಸಿಗುತ್ತಿದೆ. ಎಪಿಎಲ್ ಕಾರ್ಡ್​ದಾರರಿಗೆ ಅರ್ಧ ಸಬ್ಸಿಡಿ ಸಿಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

Related Video