Asianet Suvarna News Asianet Suvarna News

ಎಂಐಎಂ ಬಿಜೆಪಿ ಬಿ- ಟೀಂ, ಹಣ ಹಂಚಿ ಬಿಜೆಪಿ ಹೆಚ್ಚು ಸೀಟು ಗೆದ್ದಿದೆ: ಶರಣ ಪ್ರಕಾಶ್ ಪಾಟೀಲ್

ಸಾಕಷ್ಟು ಜಿದ್ದಾಜಿದ್ದಿನಿಂದ ಕೂಡಿದ್ದ ಹುಬ್ಬಳ್ಳಿ- ಧಾರವಾಡ, ಕಲಬುರಗಿ ಹಾಗೂ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣಾ ಮತ ಎಣಿಕೆ ನಡೆದಿದೆ. 

ಬೆಂಗಳೂರು (ಸೆ. 06): ಸಾಕಷ್ಟು ಜಿದ್ದಾಜಿದ್ದಿನಿಂದ ಕೂಡಿದ್ದ ಹುಬ್ಬಳ್ಳಿ- ಧಾರವಾಡ, ಕಲಬುರಗಿ ಹಾಗೂ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣಾ ಮತ ಎಣಿಕೆ ನಡೆದಿದೆ. 

ಬೆಳಗಾವಿಯಲ್ಲಿ ಬಿಜೆಪಿ ಅಧಿಕಾರಕ್ಕೇರಿ ಇತಿಹಾಸ ಸೃಷ್ಟಿ: MES ಗೆ ಭಾರೀ ಮುಖಭಂಗ

ಈ ಫಲಿತಾಂಶದ ಬಗ್ಗೆ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಶರಣ ಪ್ರಕಾಶ್ ಪಾಟೀಲ್ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಕಲಬುರಗಿಯಲ್ಲಿ ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು, ಕಾಂಗ್ರೆಸ್ ಪಕ್ಷದ ನಾಯಕರ ಮೇಲೆ ಪೊಲೀಸ್ ಕಮಿಷನರ್ ಹಲ್ಲೆ ಮಾಡಿ ಭಯದ ವಾತಾವರಣ ಸೃಷ್ಟಿಸಿದ್ದಾರೆ. ಆಡಳಿತ ಯಂತ್ರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಎಂಐಎಂ ಬಿಜೆಪಿಯ ಬಿ ಟೀಂ ಮಾಡಿಕೊಂಡು ಚುನಾವಣೆ ಎದುರಿಸಿದ್ಧಾರೆ ಎಂದು ಶರಣ ಪ್ರಕಾಶ್ ಪಾಟೀಲ್ ಆರೋಪಿಸಿದ್ದಾರೆ. 

 

Video Top Stories