Asianet Suvarna News Asianet Suvarna News

ಇಂದಿನಿಂದ ಧಾರ್ಮಿಕ ಕ್ಷೇತ್ರಗಳು ಓಪನ್; ದರ್ಶನಕ್ಕೆ ಅವಕಾಶ, ವಿಶೇಷ ಪೂಜೆ ಇರುವುದಿಲ್ಲ

 ಮೂರನೇ ಹಂತದ ಲಾಕ್‌ಡೌನ್ ಸಡಿಲಿಕೆಯಲ್ಲಿ ಬಹುತೇಕ ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ.  2 ತಿಂಗಳುಗಳಿಂದ ಬಂದ್ ಆಗಿದ್ದ ದೇವಸ್ಥಾನಗಳು ಇಂದಿನಿಂದ ತೆರೆಯಲಿವೆ. 

First Published Jul 5, 2021, 10:52 AM IST | Last Updated Jul 5, 2021, 11:07 AM IST

ಬೆಂಗಳೂರು (ಜು. 05): ಮೂರನೇ ಹಂತದ ಲಾಕ್‌ಡೌನ್ ಸಡಿಲಿಕೆಯಲ್ಲಿ ಬಹುತೇಕ ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ.  2 ತಿಂಗಳುಗಳಿಂದ ಬಂದ್ ಆಗಿದ್ದ ದೇವಸ್ಥಾನಗಳು ಇಂದಿನಿಂದ ತೆರೆಯಲಿವೆ. ಭಕ್ತರಿಗೆ ದರ್ಶನಕ್ಕೆ ಅವಕಾಶ ಕೊಡಲಾಗಿದೆ.

ಇಂದಿನಿಂದ ದೇಗುಲ ಓಪನ್: ಶೃಂಗೇರಿಯಲ್ಲಿ ಐಡಿ ಕಾರ್ಡ್ ಕಡ್ಡಾಯ

ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಮೈಸೂರು ಚಾಮುಂಡಿ ಬೆಟ್ಟ, ಶೃಂಗೇರಿ, ಕೊಲ್ಲೂರು, ಸಿಗಂದೂರು ಸೇರಿದಂತೆ ರಾಜ್ಯಾದ್ಯಂತ ಎಲ್ಲಾ ದೇಗುಲಗಳನ್ನು ಇಂದಿನಿಂದ ತೆರೆಯಲಾಗುತ್ತಿದೆ. ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿದ್ದು, ವಿಶೇಷ ಪೂಜೆ, ಪ್ರಸಾದ ವಿನಿಯೋಗ ಇರುವುದಿಲ್ಲ. 

 

Video Top Stories