Asianet Suvarna News Asianet Suvarna News

ಪತ್ರಕರ್ತರ ಸಂಘದಿಂದ ಪ್ರತಿಭಾ ಪುರಸ್ಕಾರ: 2.5 ಲಕ್ಷ ರೂ. ಘೋಷಿಸಿದ ವಿ. ಸೋಮಣ್ಣ

ಬೆಂಗಳೂರಿನ ಪ್ರೆಸ್ ಕ್ಲಬ್'ನಲ್ಲಿ ಇದೇ ಮೊದಲ ಬಾರಿಗೆ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು. 
 

ಕಾರ್ಯಕ್ರಮದಲ್ಲಿ ಕಳೆದ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಗಳಿಸಿದ 160ಕ್ಕೂ ಹೆಚ್ಚಿನ ರಾಜ್ಯದ ಪತ್ರಕರ್ತರ ಮಕ್ಕಳನ್ನು ಪುರಸ್ಕರಿಸಲಾಯಿತು. ಕಾರ್ಯನಿರತ ಪತ್ರಕರ್ತರ ಸಂಘವು ಮೊದಲ ಬಾರಿಗೆ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಸಿದ್ದು,ಇದನ್ನು ಮುಂದುವರೆಸಿಕೊಂಡು ಹೋಗುವ ಸಲುವಾಗಿ 2.5 ಲಕ್ಷ ರೂ. ದೇಣಿಗೆ ನೀಡುವುದಾಗಿ ವಸತಿ ಸಚಿವ ವಿ. ಸೋಮಣ್ಣ ಘೋಷಿಸಿದರು.

ಕಟೀಲ್‌ ಆರೋಪ ಗಂಭೀರವಾಗಿ ಪರಿಗಣಿಸುವ ಹಾಗಿಲ್ಲ: ಮಾಜಿ ಸಚಿವ ಎಂ.ಬಿ.ಪಾಟೀಲ