ಪ್ರವಾಹದಿಂದ ತತ್ತರಿಸಿರುವ ಬೆಳಗಾವಿಗೆ BSY ದೌಡು; ಕತ್ತಿ ಪ್ರತಿಕ್ರಿಯಿಸಿದ್ದು ಹೀಗೆ
ಸಿಎಂ ಯಡಿಯೂರಪ್ಪ ಈಗ ತಾನೇ ಕೋವಿಡ್ನಿಂದ ಗುಣಮುಖರಾಗಿ ಕರ್ತವ್ಯಕ್ಕೆ ಹಾಜರಾಗಿದ್ಧಾರೆ. ಕೊರೊನಾ ಮರುಕಳಿಸುವ ಬಗ್ಗೆ ವೈದ್ಯರು ಎಚ್ಚರಿಕೆ ನೀಡಿದರೂ ರಾಜಾಹುಲಿ ಮಾತ್ರ ಕ್ಯಾರೇ ಎಂದಿಲ್ಲ. ಪ್ರವಾಹದಿಂದ ತತ್ತರಿಸಿರುವ ಬೆಳಗಾವಿ ಜಿಲ್ಲೆಯ ಜನರ ನೆರವಿಗೆ ಧಾವಿಸಿದ್ದಾರೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ.
ಬೆಳಗಾವಿ (ಆ. 25): ಸಿಎಂ ಯಡಿಯೂರಪ್ಪ ಈಗ ತಾನೇ ಕೋವಿಡ್ನಿಂದ ಗುಣಮುಖರಾಗಿ ಕರ್ತವ್ಯಕ್ಕೆ ಹಾಜರಾಗಿದ್ಧಾರೆ. ಕೊರೊನಾ ಮರುಕಳಿಸುವ ಬಗ್ಗೆ ವೈದ್ಯರು ಎಚ್ಚರಿಕೆ ನೀಡಿದರೂ ರಾಜಾಹುಲಿ ಮಾತ್ರ ಕ್ಯಾರೇ ಎಂದಿಲ್ಲ. ಪ್ರವಾಹದಿಂದ ತತ್ತರಿಸಿರುವ ಬೆಳಗಾವಿ ಜಿಲ್ಲೆಯ ಜನರ ನೆರವಿಗೆ ಧಾವಿಸಿದ್ದಾರೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ.
'ಸಿಎಂ ಬಿಎಸ್ವೈ ಕೊರೊನಾದಿಂದ ಗುಣಮುಖರಾಗಿದ್ದಾರೆ. ರಾಜ್ಯದ ಮುಖ್ಯಮಂತ್ರಿಯಾಗಿ ಅವರು ಪ್ರವಾಹ ಪೀಡಿತ ಪ್ರದೇಶಗಳಿಗೆ ಬರಬೇಕಾಗುತ್ತದೆ. ಜನರ ಸಂಕಷ್ಟವನ್ನು ಕೇಳಬೇಕಾಗುತ್ತದೆ. ಅದಕ್ಕೆ ಪರಿಹಾರವನ್ನೂ ನೀಡಬೇಕಾಗುತ್ತದೆ' ಎಂದು ಉಮೇಶ್ ಕತ್ತಿ ಪ್ರತಿಕ್ರಿಯಿಸಿದ್ದಾರೆ.
ವೈದ್ಯರ ಸಲಹೆ ಧಿಕ್ಕರಿಸಿ ಸಿಎಂ ಬಿಎಸ್ವೈ ಬೆಳಗಾವಿಯಲ್ಲಿ ವೈಮಾನಿಕ ಸಮೀಕ್ಷೆ