
ಭಾರತ್ ಬಂದ್ ಯಶಸ್ವಿಗೊಳಿಸುತ್ತೇವೆ: ಕೋಡಿಹಳ್ಳಿ ಚಂದ್ರಶೇಖರ್
* ಭಾರತ್ ಬಂದ್ಗೆ ನಾರಾಯಣಗೌಡ, ವಾಟಾಳ್ ನಾಗರಾಜ್, ಪ್ರವೀಣ್ ಶೆಟ್ಟಿ ಬೆಂಬಲ
* ಬಂದ್ ಯಶಸ್ವಿಗೊಳಿಸಲು ಪೂರ್ವ ತಯಾರಿ
* ರೈತ ಸಂಘಗಳು ಒಟ್ಟಾಗಿ ಕೆಲಸ ಮಾಡುತ್ತಿವೆ: ಕೋಡಿಹಳ್ಳಿ ಚಂದ್ರಶೇಖರ್
ಬೆಂಗಳೂರು(ಸೆ.24): ಸೆ.27 ರ ಭಾರತ್ ಬಂದ್ಗೆ ರಾಜ್ಯದಲ್ಲೂ ಬೆಂಬಲ ವ್ಯಕ್ತವಾಗುತ್ತಿದೆ. ಬಂದ್ ಯಶಸ್ವಿಗೊಳಿಸಲು ಪೂರ್ವ ತಯಾರಿಯನ್ನ ಮಾಡಿಕೊಳ್ಳಲಾಗುತ್ತಿದೆ ಅಂತ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ. ನಾರಾಯಣಗೌಡ, ವಾಟಾಳ್ ನಾಗರಾಜ್, ಪ್ರವೀಣ್ ಶೆಟ್ಟಿ ಬೆಂಬಲ ಸೂಚಿಸಿದ್ದಾರೆ. ರೈತ ಸಂಘಗಳು ಒಟ್ಟಾಗಿ ಕೆಲಸ ಮಾಡುತ್ತಿವೆ. ಕಾರ್ಮಿಕ ಸಂಘ, ದಲಿತ ಸಂಘ ಎಲ್ಲವೂ ಒಟ್ಟಾಗಿದೆ. ನಗರದ ಟೌನ್ಹಾಲ್ನಲ್ಲಿ ಮೆರವಣಿಗೆ, ಮೈಸೂರು ಬ್ಯಾಂಕ್ ಸರ್ಕಲ್ನಲ್ಲಿ ಬೃಹತ್ ಸಭೆ, ಹೆದ್ದಾರಿ ಬಂದ್, ರೈಲು ಬಂದ್ ನಡೆಸಲಿದ್ದೇವೆ ಅಂತ ಮಾಹಿತಿ ನೀಡಿದ್ದಾರೆ.
Add Asianetnews Kannada as a Preferred Source
