Asianet Suvarna News Asianet Suvarna News

ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ, ಮುಷ್ಕರಕ್ಕೆ ನಮ್ಮ ಬೆಂಬಲವಿಲ್ಲ: ಕಲ್ಬುರ್ಗಿ ನೌಕರರು

ರಾಜ್ಯಾದ್ಯಂತ ಬಸ್‌ ಸೇವೆಯನ್ನು ಸ್ಥಗಿತಗೊಳಿಸಿ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ. ಈ ಪ್ರತಿಭಟನೆಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕಲಬುರ್ಗಿಯಲ್ಲಿ ಬೆಳಿಗ್ಗೆಯಿಂದ ಬಸ್ ಸಂಚಾರ ಯಥಾ ಪ್ರಕಾರವಾಗಿದೆ. 

ಬೆಂಗಳೂರು (ಡಿ. 11): ರಾಜ್ಯಾದ್ಯಂತ ಬಸ್‌ ಸೇವೆಯನ್ನು ಸ್ಥಗಿತಗೊಳಿಸಿ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ. ಈ ಪ್ರತಿಭಟನೆಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕಲಬುರ್ಗಿಯಲ್ಲಿ ಬೆಳಿಗ್ಗೆಯಿಂದ ಬಸ್ ಸಂಚಾರ ಯಥಾ ಪ್ರಕಾರವಾಗಿದೆ. ಕೆಎಸ್‌ಆರ್‌ಟಿಸಿ ನಿಲ್ದಾಣಕ್ಕೆ ಪ್ರಯಾಣಿಕರು ಆಗಮಿಸುತ್ತಿದ್ದಾರೆ. ಇಲ್ಲಿನ ಸಿಬ್ಬಂದಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿಲ್ಲ. 'ನಮ್ಮನ್ನು ಸಂಪರ್ಕಿಸದೇ, ವಿಶ್ವಾಸಕ್ಕೆ ತೆಗೆದುಕೊಳ್ಳದೇ ಮುಷ್ಕರಕ್ಕೆ ಕರೆ ಕೊಡಲಾಗಿದೆ. ಹಾಗಾಗಿ ನಾವು ಬಂದ್‌ನಲ್ಲಿ ಭಾಗಿಯಾಗುವುದಿಲ್ಲ' ಎಂದಿದ್ದಾರೆ. ಹಾಗಾಗಿ ಬಸ್ ಸಂಚಾರ ಯಥಾಸ್ಥಿತಿಯಲ್ಲಿದೆ. 

ಪ್ರಯಾಣಿಕರೇ ಗಮನಿಸಿ, ಇಂದು ಬಸ್ ಸಂಚಾರ ಬಹುತೇಕ ಸ್ಥಬ್ಧ