ಮತ್ತೆ ಸಿಡಿದೆದ್ದ ಸಾರಿಗೆ ನೌಕರರು: ಸರ್ಕಾರಕ್ಕೆ ಮಾ.15ರ ಡೆಡ್ಲೈನ್..!
ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾದ ಸಾರಿಗೆ ನೌಕರರು| ಸಾರಿಗೆ ನೌಕರರ 8 ಬೇಡಿಕೆಗಳ ಈಡೇರಿಕೆಗಾಗಿ ಡೆಡ್ಲೈನ್| ಬೇಡಿಕೆ ಈಡೇರದಿದ್ದರೆ ಮತ್ತೆ ಹೋರಾಟ|
ಬೆಂಗಳೂರು(ಫೆ.25): ರಾಜ್ಯ ಸರ್ಕಾರದ ವಿರುದ್ಧ ಸಾರಿಗೆ ನೌಕರರು ಮತ್ತೊಮ್ಮೆ ಸಿಡಿದೆದ್ದಿದ್ದಾರೆ. ಹೌದು, ಮತ್ತೊಂದು ಸುತ್ತಿನ ಹೋರಾಟಕ್ಕೆ ಸಾರಿಗೆ ನೌಕರರು ಸಜ್ಜಾಗಿದ್ದಾರೆ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.
'ಸೋತ್ರೂ ಬುದ್ಧಿ ಬಂದಿಲ್ಲ, ಈ ಜನ್ಮದಲ್ಲಿ ಸಿದ್ದರಾಮಯ್ಯ ಮತ್ತೆ ಸಿಎಂ ಆಗಲ್ಲ'
ಸಾರಿಗೆ ನೌಕರರ 8 ಬೇಡಿಕೆಗಳ ಈಡೇರಿಕೆಗಾಗಿ ಮಾ. 15ಕ್ಕೆ ಡೆಡ್ಲೈನ್ ನೀಡಿದ್ದಾರೆ. ಸರ್ಕಾರಿ ನೌಕರರನ್ನಾಗಿ ಮಾಡಲು ಬಿಗಿಪಟ್ಟು ಹಿಡಿದಿದ್ದಾರೆ. ಇದರ ಜೊತೆಗೆ 6ನೇ ವೇತನ ಆಯೋಗಕ್ಕೂ ಜಾರಿಗೆ ಆಗ್ರಹಿಸುತ್ತಿದ್ದಾರೆ. ಬೇಡಿಕೆ ಈಡೇರದಿದ್ದರೆ ಮತ್ತೆ ಹೋರಾಟ ಮಾಡುವುದಾಗಿ ತಿಳಿಸಿದ್ದಾರೆ.