ಕೋವಿಡ್ನಿಂದ ಮೃತಪಟ್ಟವರ ಅನಾಥ ಅಸ್ಥಿಗಳಿಗೆ ಸರ್ಕಾರದಿಂದಲೇ ಮುಕ್ತಿ
ಕೊರೋನಾ ವೈರಸ್ ಸೋಂಕಿನಿಂದ ಮೃತಪಟ್ಟಸುಮಾರು ಒಂದು ಸಾವಿರಕ್ಕಿಂತ ಹೆಚ್ಚು ಅನಾಥ ಶವಗಳ ಅಸ್ಥಿಯನ್ನು ಕಂದಾಯ ಸಚಿವ ಆರ್.ಅಶೋಕ್ ಅವರು ವಿಧಿವತ್ತಾಗಿ ವಿಸರ್ಜಿಸಿದ್ದಾರೆ.
ಬೆಂಗಳೂರು (ಜೂ. 02): ಕೊರೋನಾ ವೈರಸ್ ಸೋಂಕಿನಿಂದ ಮೃತಪಟ್ಟಸುಮಾರು ಒಂದು ಸಾವಿರಕ್ಕಿಂತ ಹೆಚ್ಚು ಅನಾಥ ಶವಗಳ ಅಸ್ಥಿಯನ್ನು ಕಂದಾಯ ಸಚಿವ ಆರ್.ಅಶೋಕ್ ಅವರು ವಿಧಿವತ್ತಾಗಿ ವಿಸರ್ಜಿಸಿದ್ದಾರೆ.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬೆಳವಾಡಿಯಲ್ಲಿರುವ ಅನ್ನಪೂರ್ಣೇಶ್ವರಿ ಮತ್ತು ಶ್ರೀ ಕಾಶಿ ವಿಶ್ವನಾಥ ದೇವಸ್ಥಾನ ಸಮೀಪದ ಕಾವೇರಿ ನದಿಯಲ್ಲಿ ಅಸ್ಥಿ ವಿಸರ್ಜನೆ ನಡೆದಿದೆ. ವೇದಬ್ರಹ್ಮ ಡಾ. ಭಾನುಪ್ರಕಾಶ್ ನೇತೃತ್ವದಲ್ಲಿ ಅಂತಿಮ ವಿಧಿವಿಧಾನ ನಡೆದಿದೆ.