
ರೈತರ ಹೋರಾಟಕ್ಕೆ ಡೋಂಟ್ ಕೇರ್, ಮಗನಿಗೆ ಅಧಿಕಾರ ದುರುಪಯೋಗಪಡಿಸಿಕೊಂಡ್ರಾ ಸುಮಲತಾ..?
ತಮ್ಮ ಪುತ್ರನ ಚಿತ್ರ 'ಬ್ಯಾಡ್ ಮ್ಯಾನರ್ಸ್' ಚಿತ್ರೀಕರಣಕ್ಕಾಗಿ ಮೈಷುಗರ್ ಸಕ್ಕರೆ ಕಾರ್ಖಾನೆಯನ್ನು ಬಳಸಿಕೊಳ್ಳುವ ಮೂಲಕ ಸಂಸದೆ ಸುಮಲತಾ ಅಂಬರೀಶ್ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಆರೋಪಿಸಿದೆ.
ಬೆಂಗಳೂರು (ಜ. 20): ತಮ್ಮ ಪುತ್ರನ ಚಿತ್ರ 'ಬ್ಯಾಡ್ ಮ್ಯಾನರ್ಸ್' ಚಿತ್ರೀಕರಣಕ್ಕಾಗಿ ಮೈಷುಗರ್ ಸಕ್ಕರೆ ಕಾರ್ಖಾನೆಯನ್ನು ಬಳಸಿಕೊಳ್ಳುವ ಮೂಲಕ ಸಂಸದೆ ಸುಮಲತಾ ಅಂಬರೀಶ್ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಆರೋಪಿಸಿದೆ.
Add Asianetnews Kannada as a Preferred Source

ಮೂನ್ ವಾಕ್ ಮಾಡುತ್ತಲೇ, ಟ್ರಾಫಿಕ್ ಕಂಟ್ರೋಲ್ ಮಾಡಿದ ಪೊಲೀಸ್, ಹಿಮಪಾತದಲ್ಲಿ ಈ ಸಾಹಸಿ ಬದುಕಿದ್ದೇ ಪವಾಡ!
ಕಾರ್ಖಾನೆ ಖಾಸಗಿ ಆಸ್ತಿಯಲ್ಲ, ಅದು ಜಿಲ್ಲೆಯ ಜನರ ಆಸ್ತಿ. ಇದನ್ನು ಸಂಸದೆ ಸುಮಲತಾ ಅಂಬರೀಶ್ ಅರಿಯಬೇಕು. ತಮ್ಮ ಸ್ಥಾಪಿತ ಖಾಸಗಿ ಮನೋಭಾವವನ್ನು ಜಿಲ್ಲೆಯ ಜನರ ಮೇಲೆ ಹೇರುವುದು ಸರಿಯಲ್ಲ. ರೈತರಿಗೆ ಅನುಕೂಲ ಕಲ್ಪಿಸುವ ಸಲುವಾಗಿಯೇ ಕಾರ್ಖಾನೆಯನ್ನು ಖಾಸಗೀಕರಣಗೊಳಿಸಿ ಪ್ರಾರಂಭಿಸುತ್ತೇನೆ ಎಂದು ಹೇಳುತ್ತಲೇ 40 ವರ್ಷಗಳ ಕಾಲ ಗುತ್ತಿಗೆ ನೀಡಿ ರೈತರಿಗೆ ಶಾಶ್ವತವಾಗಿ ಅನ್ಯಾಯ ಮಾಡಿದ್ದಾರೆ ಎಂದು ಟೀಕಿಸಿದೆ.