Asianet Suvarna News Asianet Suvarna News

ಲೈಂಗಿಕ ದೌರ್ಜನ ನಡೆದೇ ಇಲ್ಲ, ಹಣಕ್ಕಾಗಿ ನಡೆದ ಷಡ್ಯಂತ್ರವಿದು: ವಕೀಲ ರಾಜೇಶ್

ಮಂಗಳೂರಿನ ಖ್ಯಾತ ವಕೀಲ ಕೆಎಸ್‌ಎನ್ ರಾಜೇಶ್ ಭಟ್ ವಿರುದ್ಧ ಲೈಂಗಿಕ ಕಿರುಕುಳದ ದೂರು ದಾಖಲಾಗಿದೆ. ತಮ್ಮ ಕಚೇರಿಯಲ್ಲಿ ಇಂಟರ್ನಿಯಾಗಿ ಕೆಲಸ ಮಾಡುತ್ತಿದ್ದ ಜ್ಯೂನಿಯರ್ ವಿದ್ಯಾರ್ಥಿನಿಯಾಗಿ ಕೆಲಸ ಮಾಡುತ್ತಿದ್ದ ವಿದ್ಯಾರ್ಥಿನಿ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಬೆಂಗಳೂರು (ಅ. 19): ಮಂಗಳೂರಿನ ಖ್ಯಾತ ವಕೀಲ ಕೆಎಸ್‌ಎನ್ ರಾಜೇಶ್ ಭಟ್ ವಿರುದ್ಧ ಲೈಂಗಿಕ ಕಿರುಕುಳದ ದೂರು ದಾಖಲಾಗಿದೆ. ತಮ್ಮ ಕಚೇರಿಯಲ್ಲಿ ಇಂಟರ್ನಿಯಾಗಿ ಕೆಲಸ ಮಾಡುತ್ತಿದ್ದ ಜ್ಯೂನಿಯರ್ ವಿದ್ಯಾರ್ಥಿನಿಯಾಗಿ ಕೆಲಸ ಮಾಡುತ್ತಿದ್ದ ವಿದ್ಯಾರ್ಥಿನಿ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಮಂಗಳೂರು ಖ್ಯಾತ ವಕೀಲನ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ, ಸಂತ್ರಸ್ತೆ ಜೊತೆಗಿನ ಆಡಿಯೋ ವೈರಲ್

ಈ ಆರೋಪದ ಬಗ್ಗೆ ವಕೀಲ ರಾಜೇಶ್ ಭಟ್ ಪ್ರತಿಕ್ರಿಯಿಸಿದ್ಧಾರೆ' 'ಈ ಪ್ರಕರಣ ನಡೆದೇ ಇಲ್ಲ. ಇದು ನನ್ನ ವಿರುದ್ಧ ನಡೆದ ಷಡ್ಯಂತ್ರ. ನಾನು ಕದ್ರಿ ಪೊಲೀಸ್ ಠಾಣೆಗೆ ಈ ಮೊದಲೇ ದೂರು ಕೊಟ್ಟಿದ್ದೆ. ಆದರೆ ಪೊಲೀಸರು ಇನ್ನೂ ವಿಚಾರಣೆ ಮಾಡಿಲ್ಲ. ಹಣ ವಸೂಲಿ ಮಾಡುವ ಉದ್ದೇಶದಿಂದ ಈ ರೀತಿ ಆರೋಪ ಮಾಡಲಾಗಿದೆ. ಇದರಲ್ಲಿ ಸಾಕಷ್ಟು ಮಂದಿ ಭಾಗಿಯಾಗಿದ್ಧಾರೆ' ಎಂದು ರಾಜೇಶ್ ಆಡಿಯೋ ಮೂಲಕ ಹೇಳಿದ್ದಾರೆ. 

Video Top Stories