
ಸುನೀಲ್ ಕುಮಾರ್ ಪುಸ್ತಕ ಕೋರಿಕೆಗೆ ಭಾರೀ ಸ್ಪಂದನೆ; 600 ಕ್ಕೂ ಹೆಚ್ಚು ಪುಸ್ತಕಗಳ ಸಂಗ್ರಹ!
ಸುನೀಲ್ ಕುಮಾರ್ ಅವರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ, ನನ್ನನ್ನು ಅಭಿನಂದಿಸಲು ಬರುವವರು ಹಾರ, ತುರಾಯಿ ತರಬೇಡಿ. ಒಂದು ಕನ್ನಡ ಪುಸ್ತಕ ಕೊಂಡು ತನ್ನಿ. ಅದನ್ನು ಕಾರ್ಕಳ ಗ್ರಂಥಾಲಯಕ್ಕೆ ಕೊಡುತ್ತೇನೆ ಎಂದು ಮನವಿ ಮಾಡಿದ್ದರು. ಸಚಿವರ ಈ ಕೆಲಸಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.
ಬೆಂಗಳೂರು (ಆ. 14): ಸುನೀಲ್ ಕುಮಾರ್ ಅವರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ, ನನ್ನನ್ನು ಅಭಿನಂದಿಸಲು ಬರುವವರು ಹಾರ, ತುರಾಯಿ ತರಬೇಡಿ. ಒಂದು ಕನ್ನಡ ಪುಸ್ತಕ ಕೊಂಡು ತನ್ನಿ. ಅದನ್ನು ಕಾರ್ಕಳ ಗ್ರಂಥಾಲಯಕ್ಕೆ ಕೊಡುತ್ತೇನೆ ಎಂದು ಮನವಿ ಮಾಡಿದ್ದರು. ಸಚಿವರ ಈ ಕೆಲಸಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.
Add Asianetnews Kannada as a Preferred Source

ಇಂಧನ ಖಾತೆ ಸಿಕ್ಕಿದ್ದಕ್ಕೆ ಸುನೀಲ್ ಕುಮಾರ್ ಖುಷ್, ಕೆಲಸ ಮಾಡಲು ಫುಲ್ ಜೋಷ್..!
ಸುನೀಲ್ ಕುಮಾರ್ ಅವರನ್ನು ಅಭಿನಂದಿಸಲು ಬಂದ ಕಾರ್ಯಕರ್ತರು, ಅಭಿಮಾನಿಗಳಿಂದ 600 ಕ್ಕೂ ಹೆಚ್ಚು ಪುಸ್ತಕಗಳು ಸಂಗ್ರಹವಾಗಿದೆ. ಕಾದಂಬರಿ, ಪ್ರಬಂಧ, ಡಿಕ್ಷನರಿ, ಸೇರಿ 600 ಕ್ಕೂ ಹೆಚ್ಚು ಪುಸ್ತಕಗಳು ಸಂಗ್ರಹವಾಗಿದೆ. ಇವುಗಳನ್ನು ಕಾರ್ಕಳ ಗ್ರಂಥಾಲಯಕ್ಕೆ ನೀಡಲಿದ್ದಾರೆ.