Asianet Suvarna News Asianet Suvarna News

ಲಾಕ್‌ಡೌನ್‌ನಿಂದ ಕಂಗಾಲಾಗಿದ್ದ ಬಡವರಿಗೆ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ನೆರವು

ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ನೆರವಿನ ಹಸ್ತ ಚಾಚಿದ್ದಾರೆ. ಕೋರಮಂಗಲದ ಕೊಳಗೇರಿ ಪ್ರದೇಶದ ನೂರಾರು ಕುಟುಂಬಗಳಿಗೆ ತರಕಾರಿ, ಬ್ರೆಡ್, ಆಹಾರ ಪದಾರ್ಥಗಳನ್ನು ವಿತರಿಸಿದ್ದಾರೆ. ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಈ ಸಂದರ್ಭದಲ್ಲಿ ಹಾಜರಿದ್ದರು.

ಬೆಂಗಳೂರು (ಏ. 26): ಲಾಕ್‌ಡೌನ್‌ನಿಂದ ಕಂಗಾಲಾಗಿದ್ದ ಜನರಿಗೆ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ನೆರವಿನ ಹಸ್ತ ಚಾಚಿದ್ದಾರೆ. ಕೋರಮಂಗಲದ ಕೊಳಗೇರಿ ಪ್ರದೇಶದ ನೂರಾರು ಕುಟುಂಬಗಳಿಗೆ ತರಕಾರಿ, ಬ್ರೆಡ್, ಆಹಾರ ಪದಾರ್ಥಗಳನ್ನು ವಿತರಿಸಿದ್ದಾರೆ. ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಈ ಸಂದರ್ಭದಲ್ಲಿ ಹಾಜರಿದ್ದರು.

ಮೇ 3 ರ ಬಳಿಕ ಲಾಕ್‌ಡೌನ್ ಮುಂದುವರೆಯುತ್ತಾ? ಸಿಎಂ ನಿರ್ಧಾರವೇನು?

ಇದೇ ಸಂದರ್ಭದಲ್ಲಿ ತೇಜಸ್ವಿ ಸೂರ್ಯ, ಮೇ 3 ರ ನಂತರವೂ ಎಲ್ಲರೂ ಮನೆಯಲ್ಲಿದ್ದು ಜವಾಬ್ದಾರಿಯುತವಾಗಿ ವರ್ತಿಸೋಣ. ಪ್ರಧಾನಿ ಕರೆಗೆ ಸಕಾರಾತ್ಮಕವಾಗಿ ಸ್ಪಂದಿಸಿ ಸರ್ಕಾರದ ಜೊತೆಗಿರೋಣ ಎಂದು ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ. 

 

Video Top Stories