ಲಾಕ್ಡೌನ್ನಿಂದ ಕಂಗಾಲಾಗಿದ್ದ ಬಡವರಿಗೆ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ನೆರವು
ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ನೆರವಿನ ಹಸ್ತ ಚಾಚಿದ್ದಾರೆ. ಕೋರಮಂಗಲದ ಕೊಳಗೇರಿ ಪ್ರದೇಶದ ನೂರಾರು ಕುಟುಂಬಗಳಿಗೆ ತರಕಾರಿ, ಬ್ರೆಡ್, ಆಹಾರ ಪದಾರ್ಥಗಳನ್ನು ವಿತರಿಸಿದ್ದಾರೆ. ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಈ ಸಂದರ್ಭದಲ್ಲಿ ಹಾಜರಿದ್ದರು.
ಬೆಂಗಳೂರು (ಏ. 26): ಲಾಕ್ಡೌನ್ನಿಂದ ಕಂಗಾಲಾಗಿದ್ದ ಜನರಿಗೆ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ನೆರವಿನ ಹಸ್ತ ಚಾಚಿದ್ದಾರೆ. ಕೋರಮಂಗಲದ ಕೊಳಗೇರಿ ಪ್ರದೇಶದ ನೂರಾರು ಕುಟುಂಬಗಳಿಗೆ ತರಕಾರಿ, ಬ್ರೆಡ್, ಆಹಾರ ಪದಾರ್ಥಗಳನ್ನು ವಿತರಿಸಿದ್ದಾರೆ. ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಈ ಸಂದರ್ಭದಲ್ಲಿ ಹಾಜರಿದ್ದರು.
ಮೇ 3 ರ ಬಳಿಕ ಲಾಕ್ಡೌನ್ ಮುಂದುವರೆಯುತ್ತಾ? ಸಿಎಂ ನಿರ್ಧಾರವೇನು?
ಇದೇ ಸಂದರ್ಭದಲ್ಲಿ ತೇಜಸ್ವಿ ಸೂರ್ಯ, ಮೇ 3 ರ ನಂತರವೂ ಎಲ್ಲರೂ ಮನೆಯಲ್ಲಿದ್ದು ಜವಾಬ್ದಾರಿಯುತವಾಗಿ ವರ್ತಿಸೋಣ. ಪ್ರಧಾನಿ ಕರೆಗೆ ಸಕಾರಾತ್ಮಕವಾಗಿ ಸ್ಪಂದಿಸಿ ಸರ್ಕಾರದ ಜೊತೆಗಿರೋಣ ಎಂದು ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.