Asianet Suvarna News Asianet Suvarna News

ಶ್ರೀರಂಗಪಟ್ಟಣ, ಪಾಂಡವಪುರ ತಾಲೂಕಿನ ಗಣಿ ಪ್ರದೇಶಕ್ಕೆ ಇಂದು ಸುಮಲತಾ ಭೇಟಿ

ಸಂಸದೆ ಸುಮಲತಾ ಅಂಬರೀಶ್‌ ಇಂದು ಜಿಲ್ಲೆಯ  ಶ್ರೀರಂಗಪಟ್ಟಣ ಹಾಗೂ ಪಾಂಡವಪುರ ತಾಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ. 
 

First Published Jul 7, 2021, 10:04 AM IST | Last Updated Jul 7, 2021, 10:30 AM IST

ಮಂಡ್ಯ (ಜು. 07):  ಸಂಸದೆ ಸುಮಲತಾ ಅಂಬರೀಶ್‌ ಇಂದು ಜಿಲ್ಲೆಯ  ಶ್ರೀರಂಗಪಟ್ಟಣ ಹಾಗೂ ಪಾಂಡವಪುರ ತಾಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ. 

ಮಧ್ಯಾಹ್ನ 2.30ಕ್ಕೆ ಶ್ರೀರಂಗಪಟ್ಟಣ ತಾಲೂಕಿನ ಚೆನ್ನನಕೆರೆ ಸಮೀಪ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆ ಪ್ರದೇಶ, ಮಧ್ಯಾಹ್ನ 3.30ಕ್ಕೆ ಹಂಗರಹಳ್ಳಿ ಸಮೀಪದ ಅಕ್ರಮ ಕಲ್ಲು ಗಣಿಗಾರಿಕೆ ಪ್ರದೇಶ ಹಾಗೂ ಸಂಜೆ 4.30ಕ್ಕೆ ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದ ಅಕ್ರಮ ಕಲ್ಲು ಗಣಿಗಾರಿಕೆ ಸ್ಥಳಗಳಿಗೆ ಭೇಟಿ ನೀಡಿ ಪರಿವೀಕ್ಷಣೆ ನಡೆಸಲಿದ್ದಾರೆ.

Video Top Stories