
ಬಿಜೆಪಿ ಸೇರ್ಪಡೆ ವಿಚಾರವಾಗಿ ಅಭಿಪ್ರಾಯ ಸಂಗ್ರಹಕ್ಕೆ ಮುಂದಾದ್ರಾ ಸುಮಲತಾ ಅಂಬರೀಶ್..?
ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ಬಿಜೆಪಿ ಸೇರ್ಪಡೆ ವಿಚಾರದಲ್ಲಿ ಇನ್ನೂ ಯಾವುದೇ ಸ್ಪಷ್ಟನಿರ್ಧಾರಕ್ಕೆ ಬಂದಿಲ್ಲ. ಅವರಿನ್ನೂ ಕಾಂಗ್ರೆಸ್-ಬಿಜೆಪಿ ಎಂಬ ಎರಡು ದೋಣಿಗಳ ಮೇಲೆ ನಡೆಯುತ್ತಿದ್ದಾರೆ.
ಮಂಡ್ಯ (ಏ. 28): ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ಬಿಜೆಪಿ ಸೇರ್ಪಡೆ ವಿಚಾರದಲ್ಲಿ ಇನ್ನೂ ಯಾವುದೇ ಸ್ಪಷ್ಟನಿರ್ಧಾರಕ್ಕೆ ಬಂದಿಲ್ಲ. ಅವರಿನ್ನೂ ಕಾಂಗ್ರೆಸ್-ಬಿಜೆಪಿ ಎಂಬ ಎರಡು ದೋಣಿಗಳ ಮೇಲೆ ನಡೆಯುತ್ತಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಸಾಧಿಸಿರುವ ಸುಮಲತಾ ಅಂಬರೀಶ್ ತಮ್ಮ ರಾಜಕೀಯ ಬೆಳವಣಿಗೆಗೆ ಯಾವ ಪಕ್ಷ ಸುರಕ್ಷಿತ ಎಂಬ ಬಗ್ಗೆ ಸ್ಪಷ್ಟ ನಿಲುವಿಗೆ ಬರಲಾಗದೆ ಗೊಂದಲದಲ್ಲಿದ್ದಾರೆ. ಜನಾಭಿಪ್ರಾಯ ಸಂಗ್ರಹಿಸಿ ತೀರ್ಮಾನ ಪ್ರಕಟಿಸುವುದಾಗಿ ಹೇಳುತ್ತಾ ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಇಂದು ಮದ್ದೂರಿನಲ್ಲಿ ಸ್ಥಳೀಯ ಮುಖಂಡರ ಜೊತೆ ಚರ್ಚೆ ನಡೆಸಲಿದ್ದಾರೆ.