
ಬೆಂಗಳೂರಿನಲ್ಲಿ ಭಾರೀ ಮಳೆ; ಇನ್ನೂ 3 ದಿನ ಮುಂದುವರೆಯುವ ಸಾಧ್ಯತೆ
ನಿನ್ನೆ ರಾತ್ರಿಯಿಂದ ಬೆಂಗಳೂರಿನಲ್ಲಿ ಧಾರಾಕಾರ ಮಳೆ ಸುರಿದಿದೆ. ಶಿವಾನಂದ ಸರ್ಕಲ್, ಕೆಆರ್ ಮಾರ್ಕೆಟ್, ಮಲ್ಲೇಶ್ವರಂ, ಶಾಂತಿನಗರ ಸೇರಿದಂತೆ ವಿವಿಧೆಡೆ ಧಾರಾಕಾರ ಮಳೆಯಾಗಿದೆ. ಮರಗಳು ಧರೆಗುರುಳಿವೆ.
ಬೆಂಗಳೂರು (ಅ. 21): ನಿನ್ನೆ ರಾತ್ರಿಯಿಂದ ಬೆಂಗಳೂರಿನಲ್ಲಿ ಧಾರಾಕಾರ ಮಳೆ ಸುರಿದಿದೆ. ಶಿವಾನಂದ ಸರ್ಕಲ್, ಕೆಆರ್ ಮಾರ್ಕೆಟ್, ಮಲ್ಲೇಶ್ವರಂ, ಶಾಂತಿನಗರ ಸೇರಿದಂತೆ ವಿವಿಧೆಡೆ ಧಾರಾಕಾರ ಮಳೆಯಾಗಿದೆ. ಮರಗಳು ಧರೆಗುರುಳಿವೆ. ಮರಗಳ ಸಮೀಪವಿದ್ದ ವಾಹನಗಳು ಜಖಂ ಆಗಿವೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಜನ ಜೀವನವೂ ಅಸ್ತವ್ಯಸ್ತಗೊಂಡಿದೆ. ಇನ್ನೂ 3 ದಿನ ಮಳೆ ಮುಂದುವರೆಯುವ ಸಾಧ್ಯತೆ ಇದೆ.
Add Asianetnews Kannada as a Preferred Source

ಚೌಲ್ಟ್ರಿಗೆ ನುಗ್ಗಿದ ನೀರು ; ರಿಸಪ್ಷನ್ಗೆ ಬಂದೂ ಊಟ ಮಾಡದೇ ಹೋದ್ರು ಜನರು