Asianet Suvarna News Asianet Suvarna News

ಸಚಿವರಿಂದ ಉತ್ತರ ಕೊಡಿಸಲು ಸಿಎಂ ಬಿಎಸ್‌ವೈ ರೆಡಿ

ಸಿದ್ದರಾಮಯ್ಯ ಹಾಗೂ ಡಿಕೆಶಿ ಪತ್ರಿಕಾಘೋಷ್ಠಿ ನಡೆಸುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಶುರುವಾಗಿದೆ. ಸಚಿವ ಸಂಪುಟ ಸಭೆ ಮುಕ್ತಾಯವಾಗುತ್ತಿದ್ದಂತೆ ಸಿಎಂ ಬಿಎಸ್‌ವೈ ಹಿರಿಯ ಸಚಿವರೊಂದಿಗೆ ಈ ಕುರಿತಂತೆ ಮಾತುಕತೆ ನಡೆಸಿದ್ದಾರೆ. 

ಬೆಂಗಳೂರು(ಜು.23): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಜಂಟಿ ಸುದ್ದಿಘೋಷ್ಠಿ ನಡೆಸಿ ರಾಜ್ಯ ಸರ್ಕಾರ ಕೊರೋನಾ ನಿರ್ವಹಣೆ ಹೆಸರಿನಲ್ಲಿ ಸುಮಾರು 4,167 ಕೋಟಿ ರುಪಾಯಿ ಹಣದಲ್ಲಿ ಸುಮಾರು ಎರಡು ಸಾವಿರ ಕೋಟಿ ರುಪಾಯಿ ಅಕ್ರಮ ಎಸೆಗಿದೆ ಎಂದು ಗಂಭೀರ ಅರೋಪ ಮಾಡಿದ್ದಾರೆ.

ಸಿದ್ದರಾಮಯ್ಯ ಹಾಗೂ ಡಿಕೆಶಿ ಪತ್ರಿಕಾಘೋಷ್ಠಿ ನಡೆಸುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಶುರುವಾಗಿದೆ. ಸಚಿವ ಸಂಪುಟ ಸಭೆ ಮುಕ್ತಾಯವಾಗುತ್ತಿದ್ದಂತೆ ಸಿಎಂ ಬಿಎಸ್‌ವೈ ಹಿರಿಯ ಸಚಿವರೊಂದಿಗೆ ಈ ಕುರಿತಂತೆ ಮಾತುಕತೆ ನಡೆಸಿದ್ದಾರೆ. 

ಮನೆಗೆ ಹೊರಟಿದ್ದ ಶ್ರೀರಾಮುಲುವನ್ನು ಸಭೆಗೆ ಕರೆಸಿಕೊಂಡ ಸಿಎಂ ಬಿಎಸ್‌ವೈ..!

ಆರೋಗ್ಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಕಾರ್ಮಿಕ ಇಲಾಖೆ ಸೇರಿದಂತೆ ಐದು ಇಲಾಖೆಗಳ ಮೇಲೆ ವಿಪಕ್ಷ ನಾಯಕರು ಗಂಭೀರ ಆರೋಪ ಮಾಡಿದ್ದಾರೆ. ಹೀಗಾಗಿ ಈ ಐದು ಇಲಾಖೆಯ ಸಚಿವರಿಂದಲೇ ಉತ್ತರ ಕೊಡಿಸಲು ಸಿಎಂ ಮುಂದಾಗಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

Video Top Stories