Asianet Suvarna News Asianet Suvarna News

ಲಾಕ್‌ಡೌನ್ ಸಂಕಷ್ಟದಲ್ಲಿರುವ UAE ಕನ್ನಡಿಗರಿಗೆ ಶಾಕ್!

ಕೊರೋನಾ ವೈರಸ್ ನಿಯಂತ್ರಿಸಲು ಹೇರಲಾಗಿರುವ ಲಾಕ್‌ಡೌನ್ ನಡುವೆ ದುಬೈನಲ್ಲಿರುವ ಕನ್ನಡಿಗರಿಗೆ ಶಾಕಿಂಗ್ ಸುದ್ದಿ ಸಿಕ್ಕಿದೆ. ಅಲ್ಲಿಂದ ಅವರನ್ನು ತವರುನಾಡಿಗೆ ಕರರೆತರಲು ಈವರೆಗೆ ಯಾವುದೇ ರೀತಿಯ ವ್ಯವಸ್ಥೆ ಮಾಡಿಲ್ಲ ಎಂಬ ವಿಚಾರ ಬೆಳಕಿಗೆ ಬಂದಿದೆ.

 

ದುಬೈ(ಮೇ.05): ಕೊರೋನಾ ವೈರಸ್ ನಿಯಂತ್ರಿಸಲು ಹೇರಲಾಗಿರುವ ಲಾಕ್‌ಡೌನ್ ನಡುವೆ ದುಬೈನಲ್ಲಿರುವ ಕನ್ನಡಿಗರಿಗೆ ಶಾಕಿಂಗ್ ಸುದ್ದಿ ಸಿಕ್ಕಿದೆ. ಅಲ್ಲಿಂದ ಅವರನ್ನು ತವರುನಾಡಿಗೆ ಕರರೆತರಲು ಈವರೆಗೆ ಯಾವುದೇ ರೀತಿಯ ವ್ಯವಸ್ಥೆ ಮಾಡಿಲ್ಲ ಎಂಬ ವಿಚಾರ ಬೆಳಕಿಗೆ ಬಂದಿದೆ.

ಕೇಂದ್ರ ಸರ್ಕಾರ ಅನಿವಾಸಿ ಭಾರತೀಯರನ್ನು ಕರೆತರಲು ವಿಮಾನ ವ್ಯವಸ್ಥೆ ಮಾಡುವುದಾಗಿ ಹೇಳಿತ್ತು. ಆದರೀಗ ಅರಬ್ ರಾಷ್ಟ್ರಗಳಲ್ಲಿರುವ ಕನ್ನಡಿಗರಿಗೆ ಈವರೆಗೆ ವಿಮಾನ ವ್ಯವಸ್ಥೆ ಮಾಡಿಲ್ಲ.

ಈಗಾಗಲೇ ಭಾರತಕ್ಕೆ ಮರಳಲಿರುವ ಅನಿವಾಸಿ ಭಾರತೀಯರ ಪಟ್ಟಿ ರೆಡಿಯಾಗಿದ್ದು, ಇದರಲ್ಲಿ ಕರ್ನಾಟಕದ ಒಬ್ಬ ವ್ಯಕ್ತಿಯ ಹೆಸರು ಕೂಡಾ ಇರದಿರುವುದು ಮತ್ತಷ್ಟು ಆತಂಕ ಸೃಷ್ಟಿಸಿದೆ.