Asianet Suvarna News Asianet Suvarna News

ಸಾರ್ವಜನಿಕ ಗಣೇಶೋತ್ಸವಕ್ಕೆ ಬ್ರೇಕ್; ಮನೆಯಲ್ಲಿಯೇ ಆಚರಿಸಲು ಸಿಎಂ ಸಲಹೆ

ಕೊರೊನಾದಿಂದ ಈ ಬಾರಿ ಗಣೇಶೋತ್ಸವ ಅದ್ಧೂರಿ ಆಚರಣೆ ಇಲ್ಲ. ಸಾರ್ವಜನಿಕವಾಗಿ ಗಣೇಶ ಕೂರಿಸುವಂತಿಲ್ಲ. ಮನೆಯಲ್ಲಿಯೇ ಸರಳವಾಗಿ ಗಣೇಶೋತ್ಸವವನ್ನು ಆಚರಿಸಬೇಕು ಎಂದು ಸಚಿವರು ಹಾಗೂ ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ. 
 

ಬೆಂಗಳೂರು (ಜು. 13): ಕೊರೊನಾದಿಂದ ಈ ಬಾರಿ ಗಣೇಶೋತ್ಸವ ಅದ್ಧೂರಿ ಆಚರಣೆ ಇಲ್ಲ. ಸಾರ್ವಜನಿಕವಾಗಿ ಗಣೇಶ ಕೂರಿಸುವಂತಿಲ್ಲ. ಮನೆಯಲ್ಲಿಯೇ ಸರಳವಾಗಿ ಗಣೇಶೋತ್ಸವವನ್ನು ಆಚರಿಸಬೇಕು ಎಂದು ಸಚಿವರು ಹಾಗೂ ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ. 

ಸಾರ್ವಜನಿಕವಾಗಿ ಗಣೇಶನನ್ನು ಕೂರಿಸುವುದರಿಂದ ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿದೆ. ಜನ ಹೆಚ್ಚಾಗಿ ಸೇರುವುದರಿಂದ ಸೋಂಕು ನಿಯಂತ್ರಣ ಕಷ್ಟಸಾಧ್ಯ. ಹಾಗಾಗಿ ಸುರಕ್ಷತಾ ದೃಷ್ಟಿಯಿಂದ ಎಲ್ಲರೂ ಮನೆಯಲ್ಲಿಯೇ ಆಚರಿಸಬೇಕು ಎಂದು ಸಿಎಂ ಇಂದು ವಿಡಿಯೋ ಕಾನ್ಫರೆನ್ಸ್‌ನಲ್ಲಿ ಕರೆ ನೀಡಿದ್ದಾರೆ. 

ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ BSY ವಿಡಿಯೋ ಕಾನ್ಫರೆನ್ಸ್‌: ಸಿಎಂ ಮಹತ್ವದ ಆದೇಶ

Video Top Stories