Cabinet Reshuffle: ಸಂಪುಟ ಪುನಾರಚನೆ ಬಗ್ಗೆ ಮಾಹಿತಿ ಇಲ್ಲ, ಗೋವಾ ಚುನಾವಣೆಯಲ್ಲಿ ಬ್ಯುಸಿ: ಸಿ ಟಿ ರವಿ

ಬಿಜೆಪಿ ವರಿಷ್ಠರು ಪಂಚ ರಾಜ್ಯಗಳ (5 States Elections) ವಿಧಾನಸಭಾ ಚುನಾವಣೆಯ ಬಗ್ಗೆ ತಲೆಕೆಡಿಸಿಕೊಂಡಿದ್ದರೆ ರಾಜ್ಯದ ಆಡಳಿತಾರೂಢ ಬಿಜೆಪಿಯಲ್ಲಿ ಸಂಪುಟ ವಿಸ್ತರಣೆ ಅಥವಾ ಪುನಾರಚನೆಯ ಚರ್ಚೆ ತೀವ್ರವಾಗತೊಡಗಿದೆ.

Share this Video
  • FB
  • Linkdin
  • Whatsapp

ಬೆಂಗಳೂರು (ಜ. 25): ಬಿಜೆಪಿ ವರಿಷ್ಠರು ಪಂಚ ರಾಜ್ಯಗಳ (5 States Elections) ವಿಧಾನಸಭಾ ಚುನಾವಣೆಯ ಬಗ್ಗೆ ತಲೆಕೆಡಿಸಿಕೊಂಡಿದ್ದರೆ ರಾಜ್ಯದ ಆಡಳಿತಾರೂಢ ಬಿಜೆಪಿಯಲ್ಲಿ ಸಂಪುಟ ವಿಸ್ತರಣೆ ಅಥವಾ ಪುನಾರಚನೆಯ ಚರ್ಚೆ ತೀವ್ರವಾಗತೊಡಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇನ್ನೊಂದು ವರ್ಷಕ್ಕೆ ಸಾರ್ವತ್ರಿಕ ಚುನಾವಣೆ ಎದುರಾಗುವ ಹಿನ್ನೆಲೆಯಲ್ಲಿ ಈಗಲೇ ಸಂಪುಟ ವಿಸ್ತರಣೆ ಮಾಡಬೇಕು ಎಂಬ ಅಭಿಪ್ರಾಯವನ್ನು ಹಲವು ಆಕಾಂಕ್ಷಿ ಶಾಸಕರು ವ್ಯಕ್ತಪಡಿಸುತ್ತಿದ್ದಾರೆ. ಆದರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಈ ವಿಷಯದಲ್ಲಿ ಪಕ್ಷದ ಹೈಕಮಾಂಡ್‌ ಸೂಚನೆಯನ್ನು ನಿರೀಕ್ಷಿಸುತ್ತಿದ್ದಾರೆ.

'ರಾಜಕಾರಣದಲ್ಲಿ ಸಂಪುಟ ವಿಸ್ತರಣೆ, ಪುನಾರಚನೆ ವಿಚಾರ ಆಗಾಗ ಸುದ್ದಿಯಾಗುತ್ತಲೇ ಇರುತ್ತದೆ. ಇದರ ಬಗ್ಗೆ ನಮಗೆ ಮಾಹಿತಿ ಇಲ್ಲ, ಸಿಎಂ ಕೇಳಿದರೆ ಉತ್ತರ ಕೊಡಬಹುದು, ನನಗಂತೂ ಏನೂ ಮಾಹಿತಿ ಇಲ್ಲ' ಎಂದು ಸಿ ಟಿ ರವಿ ಹೇಳಿದ್ದಾರೆ. 

Related Video