Asianet Suvarna News Asianet Suvarna News

Omicron Variant Threat: ಲಾಕ್‌ಡೌನ್‌ ಪ್ರಸ್ತಾವ ಸರ್ಕಾರದ ಮುಂದಿಲ್ಲ: ಸಿಎಂ ಬೊಮ್ಮಾಯಿ

ಕೋವಿಡ್‌ (Covid 19) ಬಗ್ಗೆ ಜನತೆ ಗಾಬರಿಯಾಗಬೇಕಿಲ್ಲ, ರಾಜ್ಯದಲ್ಲಿ ಮತ್ತೆ ಲಾಕ್‌ ಡೌನ್‌ (Lockdown) ಪ್ರಸ್ತಾವ ಸರ್ಕಾರದ ಮುಂದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಸ್ಪಷ್ಟಪಡಿಸಿದ್ದಾರೆ. 

ಬೆಂಗಳೂರು (ಡಿ. 01): ಕೋವಿಡ್‌ (Covid 19) ಬಗ್ಗೆ ಜನತೆ ಗಾಬರಿಯಾಗಬೇಕಿಲ್ಲ, ರಾಜ್ಯದಲ್ಲಿ ಮತ್ತೆ ಲಾಕ್‌ ಡೌನ್‌ (Lockdown) ಪ್ರಸ್ತಾವ ಸರ್ಕಾರದ ಮುಂದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಸ್ಪಷ್ಟಪಡಿಸಿದ್ದಾರೆ. ಶಾಲಾ-ಕಾಲೇಜುಗಳ ಮೇಲೆ ನಿಗಾ ಇಡುವಂತೆ ಸೂಚನೆ ನೀಡಿದ್ದೇವೆ. ಯಾವುದೇ ಶಾಲಾ-ಕಾಲೇಜು (School- College) ಮುಚ್ಚಲು ತಿಳಿಸಿಲ್ಲ ಎಂದೂ ಸ್ಪಷ್ಟಪಡಿಸಿದ್ದಾರೆ.

Omicron Variant Threat: ಫ್ರಂಟ್‌ಲೈನ್ ವಾರಿಯರ್ಸ್‌ಗೆ ಬೂಸ್ಟರ್ ಡೋಸ್, ಸುಧಾಕರ್ ಮಾತು

ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಿಗೂ ಕೇರಳ (Kerala) ವಿದ್ಯಾರ್ಥಿಗಳು ಹಾಗೂ ಇತರೆ ಜನರಿಗೆ ಕೋವಿಡ್‌ ನಗೆಟಿವ್‌ ವರದಿ ಕಡ್ಡಾಯಗೊಳಿಸಲಾಗಿದೆ. ಬಂದ 7 ದಿನಕ್ಕೆ ಮತ್ತೊಮ್ಮೆ ಪರೀಕ್ಷೆ ಮಾಡಿಸಲು ಸೂಚನೆ ನೀಡಲಾಗಿದೆ. ಜನರು ಹೆಚ್ಚು ಹೆಚ್ಚಾಗಿ ಗುಂಪು ಸೇರುವುದನ್ನು ತಡೆಯಲು ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ. ಸರ್ಕಾರ ನಿರಂತರವಾಗಿ ತಜ್ಞರು, ಕೇಂದ್ರ ಸರ್ಕಾರದ ಸಂಪರ್ಕದಲ್ಲಿದೆ. ಕಾಲ ಕಾಲಕ್ಕೆ ಕೇಂದ್ರ ಸರ್ಕಾರವು ನೀಡುವ ನಿರ್ದೇಶನದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.