
ಎಲ್ಲಿಗೂ ಪ್ರಯಾಣ ಬೆಳೆಸಿಲ್ಲ, ಆದರೂ 81 ಮಂದಿಗೆ ತಗುಲಿದೆ ಕೊರೋನಾ ಸೋಂಕು..!
ಇಡೀ ರಾಜ್ಯಕ್ಕೆ SARI ಮತ್ತು ILI ಪ್ರಕರಣಗಳು ದೊಡ್ಡ ತಲೆನೋವಾಗಿ ಪರಿಣಮಿಸಿವೆ. ರಾಜ್ಯದಲ್ಲಿ ಇಲ್ಲಿಯವರೆಗೆ 862 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಪೈಕಿ 81 ಮಂದಿಗೆ ಕೊರೋನಾ ಸೋಂಕು ತಗುಲಿರುವುದು ಹೇಗೆ ಎನ್ನುವುದು ಚಿದಂಬರ ರಹಸ್ಯವಾಗಿ ಉಳಿದಿದೆ.
ಬೆಂಗಳೂರು(ಮೇ.12): ಕೊರೋನಾ ಎನ್ನುವ ಮದ್ದಿಲ್ಲದ ಮಹಾಮಾರಿ ರಾಜ್ಯದ ಜನತೆಯನ್ನು ಕನಸಿನಲ್ಲೂ ಕಾಡಲಾರಂಭಿಸಿದೆ. ಕೊರೋನಾದ ಮೂಲ ಯಾವುದು ಎಂದು ಸರ್ಕಾರದಿಂದ ಹಿಡಿದು ವೈದ್ಯರವರೆಗೂ ತಲೆಕೆಡಿಸಿಕೊಂಡಿದ್ದಾರೆ.
Add Asianetnews Kannada as a Preferred Source

ಇಡೀ ರಾಜ್ಯಕ್ಕೆ SARI ಮತ್ತು ILI ಪ್ರಕರಣಗಳು ದೊಡ್ಡ ತಲೆನೋವಾಗಿ ಪರಿಣಮಿಸಿವೆ. ರಾಜ್ಯದಲ್ಲಿ ಇಲ್ಲಿಯವರೆಗೆ 862 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಪೈಕಿ 81 ಮಂದಿಗೆ ಕೊರೋನಾ ಸೋಂಕು ತಗುಲಿರುವುದು ಹೇಗೆ ಎನ್ನುವುದು ಚಿದಂಬರ ರಹಸ್ಯವಾಗಿ ಉಳಿದಿದೆ.
ಕರ್ನಾಟಕಕ್ಕೆ ಡಬಲ್ ಶಾಕ್: 2 ಜಿಲ್ಲೆಯಲ್ಲಿ ಇಬ್ಬರಿಗೆ ಕೊರೋನಾ ಸೋಂಕು..!
ಈ 81 ಮಂದಿಗೆ ಟ್ರಾವೆಲ್ ಹಿಸ್ಟರಿ ಇಲ್ಲ, ಯಾವ ಪ್ರೈಮರಿ ಸಂಪರ್ಕವೂ ಇಲ್ಲ. ಹೀಗಿದ್ದೂ ವೈರಸ್ ಹೇಗೆ ತಗುಲಿದೆ ಎನ್ನುವುದು ಮಾತ್ರ ಪತ್ತೆಯಾಗಿಲ್ಲ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.