ಲಾಕ್‌ಡೌನ್ ಸಡಿಲ: ಸಹಜ ಸ್ಥಿತಿಯತ್ತ ರಾಜ್ಯದ ಜನ-ಜೀವನ

ಕೃಷಿ, ಕೈಗಾರಿಕೆ-ಕಚೇರಿಗಳೆಲ್ಲಾ ಕಾರ್ಯನಿರ್ವಹಿಸಲಾರಂಭಿಸಿವೆ. ಆದರೆ ಸ್ವಚ್ಛತೆ ಮತ್ತು ಸಾಮಾಜಿಕ ಅಂತರವನ್ನು ಪಾಲಿಸುವುದು ಕಡ್ಡಾಯ ಎನ್ನುವ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಕೇಂದ್ರದ ಸಲಹೆ ಸೂಚನೆಯನ್ವಯ ರಾಜ್ಯ ಸರ್ಕಾರ ಈ ರಿಲ್ಯಾಕ್ಸ್ ನೀಡಿದೆ.

Share this Video
  • FB
  • Linkdin
  • Whatsapp

ಬೆಂಗಳೂರು(ಏ.24): ಲಾಕ್‌ಡೌನ್ ಮಾರ್ಗಸೂಚಿಗಳನ್ನು ಕೇಂದ್ರ ಸಡಿಲಗೊಳಿಸಿದ ಬೆನ್ನಲ್ಲೇ ಕರ್ನಾಟಕ ಸೇರಿದಂತೆ ದೇಶದೆಲ್ಲೆಡೆ ಸಹಜಸ್ಥಿತಿಯತ್ತ ಜನಜೀವನ ಮರಳಿದ ಅನುಭವವಾಗುತ್ತಿದೆ. ಮೇ 03ರವರೆಗೂ ಲಾಕ್‌ಡೌನ್ ಇದ್ದರೂ ಆರ್ಥಿಕ ಚಕ್ರಕ್ಕೆ ಚಾಲನೆ ನೀಡುವ ಸಲುವಾಗಿ ಕೊಂಚ ಸಡಿಲಗೊಳಿಸಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕೃಷಿ, ಕೈಗಾರಿಕೆ-ಕಚೇರಿಗಳೆಲ್ಲಾ ಕಾರ್ಯನಿರ್ವಹಿಸಲಾರಂಭಿಸಿವೆ. ಆದರೆ ಸ್ವಚ್ಛತೆ ಮತ್ತು ಸಾಮಾಜಿಕ ಅಂತರವನ್ನು ಪಾಲಿಸುವುದು ಕಡ್ಡಾಯ ಎನ್ನುವ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಕೇಂದ್ರದ ಸಲಹೆ ಸೂಚನೆಯನ್ವಯ ರಾಜ್ಯ ಸರ್ಕಾರ ಈ ರಿಲ್ಯಾಕ್ಸ್ ನೀಡಿದೆ.

ಕೊರೋನಾ ಹಾಟ್‌ಸ್ಪಾಟ್ ಇರುವ ಕಡೆಗಳಲ್ಲಿ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಆದರೆ ಕೊರೋನಾ ರಹಿತ ಪ್ರದೇಶಗಳಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ರಾಜ್ಯಸರ್ಕಾರ ಲಾಕ್‌ಡೌನ್ ಸಡಿಲಗೊಳಿಸಿದೆ. 

"

ಷರತ್ತುಬದ್ಧ ರೀತಿಯಲ್ಲಿ ಮಾರುಕಟ್ಟೆ, ಅಂಗಡಿ-ಮುಂಗಟ್ಟು ತೆರೆಯಲು ಸರ್ಕಾರ ಅನುಮತಿ ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಲಾಗಿದೆ. ಹೋಟೆಲ್ ತೆರದಿದ್ದರೆ ಪಾರ್ಸೆಲ್‌ಗೆ ಮಾತ್ರ ಅವಕಾಶ ನೀಡಲಾಗಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

Related Video