ಸಚಿವ ಸ್ಥಾನ ಸಿಗದಿದ್ದಕ್ಕೆ ಯಾವುದೇ ಅಸಮಾಧಾನವಿಲ್ಲ: ಸಿ ಪಿ ಯೋಗೇಶ್ವರ್
ಸಚಿವ ಸ್ಥಾನ ಸಿಗದಿದ್ದಕ್ಕೆ ಯಾವುದೇ ಅಸಮಾಧಾನವಿಲ್ಲ. ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷ ಸಂಘಟನೆ ಮಾಡುವೆ ಎಂದು ಸಿಎಂ ಬೊಮ್ಮಾಯಿ ಭೇಟಿ ಬಳಿಕ ಸಿ ಪಿ ಯೊಗೇಶ್ವರ್ ಹೇಳಿದ್ಧಾರೆ.
ಬೆಂಗಳೂರು (ಆ. 14): 'ಸಚಿವ ಸ್ಥಾನ ಸಿಗದಿದ್ದಕ್ಕೆ ಯಾವುದೇ ಅಸಮಾಧಾನವಿಲ್ಲ. ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷ ಸಂಘಟನೆ ಮಾಡುವೆ' ಎಂದು ಸಿಎಂ ಬೊಮ್ಮಾಯಿ ಭೇಟಿ ಬಳಿಕ ಸಿ ಪಿ ಯೊಗೇಶ್ವರ್ ಹೇಳಿದ್ಧಾರೆ. ಯಡಿಯೂರಪ್ಪನವರನ್ನು ಅಧಿಕಾರದಿಂದ ಕೆಳಗಿಳಿಸಲು ಪ್ರಮುಖ ಪಾತ್ರ ವಹಿಸಿದ್ದೀರಿ. ಈ ಬಗ್ಗೆ ಏನಂತೀರಿ.? ಎಂದು ಮಾಧ್ಯಮಗಳು ಪ್ರಶ್ನಿಸಿದಾಗ, ಯಾವುದೇ ಉತ್ತರ ಕೊಡದೇ ಹೊರಟು ಹೋದರು.