ಮೈಸೂರು ದಸರಾ ಮುನ್ನವೇ ಮಹಿಷ ದಸರಾಗೆ ಸಿದ್ಧತೆ: ಸರ್ಕಾರ ಅನುಮತಿ ನೀಡದಿದ್ದರೂ ಪುಷ್ಪಾರ್ಚನೆಗೆ ತೀರ್ಮಾನ

ಮೈಸೂರಿನಲ್ಲಿ ದಸರಾಗೂ ಮುನ್ನವೇ ಮಹಿಷ ದಸರಾ ಹೆಚ್ಚು ಸದ್ದು ಮಾಡುತ್ತಿದೆ. ಸರ್ಕಾರದಿಂದ ಅನುಮತಿಯೇ ಸಿಗದಿದ್ದರೂ ಬೆಟ್ಟದಲ್ಲೇ ಮಹಿಷನಿಗೆ ಪುಷ್ಪಾರ್ಚನೆ ಮಾಡಲು ಸಮಿತಿ ತೀರ್ಮಾನ ಮಾಡಿದೆ. ಇತ್ತ ಗಲಾಟೆ ಆದ್ರೂ ಸರಿಯೇ ನಾವು ಅವಕಾಶ ಕೊಡಲ್ಲ ಎನ್ನುತ್ತಿದ್ದಾರೆ ಸಂಸದ ಪ್ರತಾಪ್ ಸಿಂಹ. ಆದರೆ ಸರ್ಕಾರದ ಮೌನ ಅಧಿಕಾರಿಗಳಲ್ಲಿ ಗೊಂದಲ ಮೂಡಿಸುತ್ತಿದೆ.

First Published Sep 9, 2023, 10:42 AM IST | Last Updated Sep 9, 2023, 10:42 AM IST

ಅರಮನೆ ನಗರಿಯಲ್ಲಿ ವಿಶ್ವ ವಿಖ್ಯಾತಿ ಮೈಸೂರು ದಸರಾಗೆ(Dasara) ಭರ್ಜರಿ ತಯಾರಿ ನಡೆಸಿದೆ. ಇದರ ನಡುವೆ ಈ ಬಾರಿ ಚಾಮುಂಡಿ ಬೆಟ್ಟದಲ್ಲಿ(Chamundi Hill) ಮಹಿಷ ದಸರಾ(Mahisha dasara) ವಿವಾದ ಭುಗಿಲೆದ್ದಿದೆ. ಸರ್ಕಾರದಿಮದ ಅನುಮತಿ ದೊರೆಯುವುದಕ್ಕೂ ಮುನ್ನವೇ ಆಚರಣೆಗೆ ಸಿದ್ಧತೆ ಶುರುವಾಗಿದೆ. ಬಿಜೆಪಿ ಅಧಿಕಾರದ ಅವಧಿಯಲ್ಲಿ  ಅನುಮತಿ ನೀಡದ ಕಾರಣ ಸ್ಥಗಿತಗೊಂಡಿದ್ದ  ಮಹಿಷ ದಸರಾವನ್ನು ಈ ಬಾರಿ ಆಚರಿಸಲು ಮಹಿಷ ದಸರಾ ಆಚರಣಾ ಸಮಿತಿ ನಿರ್ಧರಿಸಿದೆ. ಸದ್ಯ ಇದುವರೆಗೂ ಮಹಿಷ ದಸರಾ ಆಚರಣೆಗೆ ಸರ್ಕಾರ ಯಾವುದೇ ಅನುಮತಿ ನೀಡಿಲ್ಲ. ಆದರೆ  ಇದೇ ಅಕ್ಟೋಬರ್ 15 ರಂದು ಸಾಂಪ್ರದಾಯಿಕ ದಸರಾ ಉದ್ಘಾಟನೆ ಆಗುತ್ತಿದ್ದು, ಅದಕ್ಕೂ 2 ದಿನ ಮುನ್ನವೇ ಮಹಿಷ ದಸರಾ ಆಚರಣೆ ಮಾಡುತ್ತಿದ್ದಾರೆ. ಮಹಿಷ ದಸರಾ ಆಚರಣಾ ಸಮಿತಿ ತೀರ್ಮಾನಿಸಿದೆ. ಈ ಸಂಬಂಧ ಕರಪತ್ರವನ್ನೂ ಹಂಚಲಾಗ್ತಿದೆ. ಮಹಿಷ ದಸರ ಆಚರಣೆಗೆ ಸಂಸದ ಪ್ರತಾಪ್ ಸಿಂಹ(Pratap Simha) ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಘರ್ಷಣೆ ಆದರೂ ಸರಿಯೇ ಬೆಟ್ಟದಲ್ಲಿ ಮಹಿಷ ದಸರಾ ಆಚರಣೆಗೆ ಅವಕಾಶ ನೀಡಲ್ಲ ಎಂದು ಕಿಡಿಕಾರಿದ್ದಾರೆ.

ಇದನ್ನೂ ವೀಕ್ಷಿಸಿ:  G20 Summit: ಬಲಾಢ್ಯ ನಾಯಕರ ಆಗಮನ.. ದೆಹಲಿಯಲ್ಲಿ ಬಿಗಿ ಬಂದೋಬಸ್ತ್