Asianet Suvarna News Asianet Suvarna News

ಆಕ್ಸಿಜನ್‌ ಕೊರತೆ: ಸಿಎಂಗೆ ಬಿಜೆಪಿ ಹೈಕಮಾಂಡ್‌ನಿಂದ ಮಹತ್ವದ ಸೂಚನೆ!

ಕರ್ನಾಟಕದಲ್ಲಿ ಕೊರೋನಾ ಹಾವಳಿ ದಿನೇ ದಿನೇ ಹೆಚ್ಚಾಘುತ್ತಿದೆ. ಇದರೊಂದಿಗೆ ಆಕ್ಸಿಜನ್‌ಗೂ ಬೇಡಿಕೆ ವೃದ್ಧಿಸುತ್ತಿದೆ. ಸದ್ಯ ಆಮ್ಲಜನಕ ಪೂರೈಸಬೇಕಾದ ತುರ್ತು ಪರಿಸ್ಥಿತಿ ಎದುರಾಗಿದೆ. ಹೀಗಿರುವಾಗ ಬಿಜೆಪಿ ಹೈಕಮಾಂಡ್‌ ಸರ್ಕಾರಕ್ಕೆ ಕಟ್ಟುನಿಟ್ಟಿನ ಕ್ರಮ ಕೂಗೊಳ್ಳುವಂತೆ ಸೂಚಿಸಿದೆ.

ಬೆಂಗಳೂರು(ಮೇ.04): ಕರ್ನಾಟಕದಲ್ಲಿ ಕೊರೋನಾ ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದೆ. ಇದರೊಂದಿಗೆ ಆಕ್ಸಿಜನ್‌ಗೂ ಬೇಡಿಕೆ ವೃದ್ಧಿಸುತ್ತಿದೆ. ಸದ್ಯ ಆಮ್ಲಜನಕ ಪೂರೈಸಬೇಕಾದ ತುರ್ತು ಪರಿಸ್ಥಿತಿ ಎದುರಾಗಿದೆ. ಹೀಗಿರುವಾಗ ಬಿಜೆಪಿ ಹೈಕಮಾಂಡ್‌ ಸರ್ಕಾರಕ್ಕೆ ಕಟ್ಟುನಿಟ್ಟಿನ ಕ್ರಮ ಕೂಗೊಳ್ಳುವಂತೆ ಸೂಚಿಸಿದೆ.

ಅತ್ತ ಈ ನಿಟ್ಟಿನಲ್ಲಿ ಉಸ್ತುವಾರಿ ಸಚಿವ ಅರುಣ್ ಸಿಂಗ್ ಕೂಡಾ ಸಿಎಂ ಬಿಎಸ್‌ವೈ ಹಾಗೂ ಆರೋಗ್ಯ ಸಚಿವ ಡಾ. ಕೆ. ಸುಧಾಕರ್‌ಗೆ ಕರೆ ಮಾಡಿ ಮಾತನಾಡಿದ್ದಾರೆ. ಈ ವೇಳೆ ಚಾಮರಾಜನಗರ ದುರಂತದ ಬಗ್ಗೆಯೂ ಉಲ್ಲೇಖಿಸಿ, ಆಕ್ಸಿಜನ್ ಪೂರೈಕೆಗೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

Video Top Stories